ಭಾರತ-ಪಾಕ್ ಸಂಘರ್ಷ | ರಾಜೌರಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ನಡೆದಿದೆ ಎಂಬುದು ಸುಳ್ಳು

Date:

Advertisements

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ನೆಲೆ ಮೇಲೆ ಆತ್ಮಹತ್ಯಾ ದಾಳಿ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಡ್ರೋನ್ ದಾಳಿ ನಡೆದಿವೆ ಎಂಬ ವಿಚಾರವಾಗಿ ಹಲವಾರು ಪೋಸ್ಟ್‌ಗಳು, ವಿಡಿಯೋಗಳು, ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆದರೆ, ಈ ಎಲ್ಲವನ್ನೂ ಭಾರತ ಸರ್ಕಾರ ಅಲ್ಲಗಳೆದಿದ್ದು, ಅವೆಲ್ಲವೂ ಸುಳ್ಳು ಸುದ್ದಿ ಮತ್ತು ವದಂತಿಗಳು ಎಂದು ಸ್ಪಷ್ಟನೆ ನೀಡಿದೆ.

ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕ್ ಯೂನಿಟ್, ಜಮ್ಮು ಮತ್ತು ಕಾಶ್ಮೀರದ ಯಾವುದೇ ಸೇನಾ ನೆಲೆಗಳಲ್ಲಿ ಯಾವುದೇ ‘ಫಿದಾಯೀನ್’ ಅಥವಾ ಆತ್ಮಹತ್ಯಾ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಲ್ಲದೆ, ಜಲಂಧರ್‌ನಲ್ಲಿ ಡ್ರೋನ್ ದಾಳಿ ನಡೆದಿದೆ ಎಂಬ ಹೇಳಿಕೆಯ ಜೊತೆಗೆ ಬೆಂಕಿ ಉರಿಯುತ್ತಿರುವ ಕೆಲವು ವಿಡಿಯೋಗಳು ವೈರಲ್ ಆಗುತ್ತಿವೆ. ಆದರೆ, ಅದು ದಾಳಿಯ ವಿಡಿಯೋ ಅಲ್ಲ. ಬದಲಾಗಿ, ಕೃಷಿ ಭೂಮಿಯಲ್ಲಿ ಕೃಷಿ ತ್ಯಾಜ್ಯವನ್ನು ಸುಡಲಾಗಿರುವ ಹಳೆಯ ವಿಡಿಯೋ ಎಂದು ಜಲಂಧರ್ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ವೈರಲ್ ಆಗುತ್ತಿರುವ ಪೋಸ್ಟ್‌ ನಕಲಿ ಎಂದು ಹೇಳಿದ್ದಾರೆ.

Advertisements

ಈ ಎರಡು ಪೋಸ್ಟ್‌ಗಳು ಮಾತ್ರವಲ್ಲದೆ, ಕಳೆದ ಎರಡು ದಿನಗಳಲ್ಲಿ ವೈರಲ್ ಆದ ಸುಮಾರು 7 ವಿಡಿಯೋಗಳ ಸತ್ಯಾಸತ್ಯತೆಯನ್ನು ಪಿಐಬಿ ಪರಿಶೀಲನೆ ಮಾಡಿದೆ. ಇವುಗಳಲ್ಲಿ ಭಾರತದ ಮೇಲೆ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿಯ ದೃಶ್ಯಾವಳಿ ಎಂದು 2020ರ ಬೈರುತ್ ಸ್ಫೋಟದ ವಿಡಿಯೋವನ್ನು ಹಂಚಿಕೊಳ್ಳಲಾಗಿರುವುದನ್ನು ಪಿಐಬಿ ಕಂಡುಹಿಡಿದೆ.

ಈ ವರದಿ ಓದಿದ್ದೀರಾ?: ಪ್ರಬುದ್ಧತೆ ತೋರುತ್ತಿರುವ ಸರ್ಕಾರ – ಯುದ್ಧ ಬಯಸುತ್ತಿರುವ ಭಕ್ತರು ಮತ್ತು ಮಾಧ್ಯಮಗಳು

ಮತ್ತೊಂದು ನಕಲಿ ವಿಡಿಯೋವನ್ನು ಪಾಕಿಸ್ತಾನ ಪಡೆಗಳು ಭಾರತೀಯ ಸೇನಾ ನೆಲೆಯನ್ನು ನಾಶಪಡಿಸಿವೆ ಎಂಬ ಹೇಳಿಕೆಯ ಜೊತೆಗೆ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಉಲ್ಲೇಖಿಸಿರುವಂತೆ ’20 ರಾಜ್ ಬೆಟಾಲಿಯನ್’ ಎಂಬ ಯಾವುದೇ ಘಟಕವು ಭಾರತೀಯ ಸೇನೆಯಲ್ಲಿ ಇಲ್ಲ ಎಂದು ಪಿಐಬಿ ಸ್ಪಷ್ಟಪಡಿಸಿದೆ.

ಗುಜರಾತ್‌ನ ಹಜೀರಾ ಬಂದರಿನ ಮೇಲಿನ ದಾಳಿ ಎಂದು ಹೇಳಿಕೊಂಡು 2021ರಲ್ಲಿ ತೈಲ ಟ್ಯಾಂಕರ್ ಸ್ಫೋಟದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜೊತೆಗೆ, ಭಾರತೀಯ ಸೇನೆಯು ತನ್ನ ಅಂಬಾಲಾ ವಾಯುನೆಲೆಯಿಂದ ಪಾಕ್ ಮೇಲೆ ದಾಳಿಗಳನ್ನು ನಡೆಸಿದೆ ಎಂದು ನಕಲಿ ವಿಡಿಯೋವನ್ನು ಹರಿಬಿಡಲಾಗಿದೆ. ಆ ವಿಡಿಯೋ ನಕಲಿ ಎಂದು ರಕ್ಷಣಾ ಸಚಿವಾಲಯವೇ ಸ್ಪಷ್ಟಪಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X