ಅ.14ರ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಪಶ್ಚಿಮ ರೈಲ್ವೆಯಿಂದ 2 ವಿಶೇಷ ರೈಲು

Date:

Advertisements

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅ.14ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಎರಡು ವಿಶೇಷ ಸೂಪರ್ಫಾಸ್ಟ್ರೈಲುಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.

“ಕ್ರಿಕೆಟ್ ಪಂದ್ಯ ನಡೆಯುವ ದಿನ ಸಾಮಾನ್ಯವಾಗಿ ಜನರ ಓಡಾಟ ಹೆಚ್ಚಾಗಿರುತ್ತದೆ. ಹಾಗಾಗಿ, ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮುಂಬೈ ಸೆಂಟ್ರಲ್ಮತ್ತು ಅಹಮದಾಬಾದ್ನಿಲ್ದಾಣದ ನಡುವೆ ವಿಶೇಷ ರೈಲು ಓಡಾಡಲಿದೆಎಂದು ಹೇಳಿದೆ.

ಭಾರತಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆ ಮಾಡುವ ಕ್ರಿಕೆಟ್ಅಭಿಮಾನಿಗಳಿಗೆ ಇದು ದೊಡ್ಡ ಕೊಡುಗೆಯಾಗಿದೆ. ಶುಕ್ರವಾರ ರಾತ್ರಿ 9.30ಕ್ಕೆ ಮುಂಬೈ ಸೆಂಟ್ರಲ್‌ – ಅಹಮದಾಬಾದ್ನಡುವಿನ ವಿಶೇಷ ರೈಲು ಹೊರಡಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಅಹಮದಾಬಾದ್ತಲುಪಲಿದೆ.

Advertisements

ಭಾನುವಾರ ಬೆಳಗ್ಗೆ 4 ಗಂಟೆಗೆ ಅಹಮದಾಬಾದ್‌–ಮುಂಬೈ ವಿಶೇಷ ರೈಲು ಹೊರಡಲಿದೆ. ಅದೇ ದಿನ ಮಧ್ಯಾಹ್ನ 12.10ಕ್ಕೆ ಮುಂಬೈ ಸೆಂಟ್ರಲ್ತಲುಪಲಿದೆ. ದಾದರ್, ಬೊರಿವಾಲಿ, ವಲ್ಸಾಡ್‌, ನವಸಾರಿ, ಸೂರತ್ಹಾಗೂ ವಡೋದರದಲ್ಲಿ ಈ ರೈಲಿಗೆ ನಿಲುಗಡೆ ಇರಲಿದೆ. ಈ ರೈಲುಗಳಿಗೆ ವಿಶೇಷ ದರ ನಿಗದಿಪಡಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳ್ಳಂಬೆಳಿಗ್ಗೆ ಬೆಂಗಳೂರು | ಗುರುವಾರ ಬೆಳ್ಳಂಬೆಳಿಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಈ ವಿಶೇಷ ರೈಲುಗಳಲ್ಲಿ ತೆರಳಲು ಅ.12ರಿಂದ ಬುಕ್ಕಿಂಗ್ಆರಂಭವಾಗಲಿದೆ. ಎಲ್ಲ ಪಿಆರ್ಎಸ್ ಕೌಂಟರ್ ಹಾಗೂ ಐಆರ್ಸಿಟಿಸಿ ವೆಬ್ಸೈಟ್ನಲ್ಲಿ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

ಎರಡು ವಿಶೇಷ ಸೂಪರ್ಫಾಸ್ಟ್ರೈಲಿನಲ್ಲಿ .ಸಿ 2 ಟೈರ್‌, .ಸಿ 3 ಟೈರ್‌, ಸ್ಲೀಪರ್ಕ್ಲಾಸ್ಹಾಗೂ ಜನರಲ್ಕ್ಲಾಸ್ಗಳ ಬೋಗಿ ಇರಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X