ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ರಾಯಭಾರಿ ಕಚೇರಿಯು ಬುಧವಾರ(ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿ 40 ನಿಮಿಷಗಳ ಸಭೆ ಏರ್ಪಡಿಸಿತ್ತು.

ಸಭೆಯ ವಿವರಗಳು ಬಿಡುಗಡೆಯಾಗಿಲ್ಲ, ಆದರೆ ಮಾತನಾಡಿದ ರಾಯಭಾರಿ ಕಚೇರಿಯ ವಕ್ತಾರರು, ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಬಗ್ಗೆ ‘ನ್ಯಾಯೋಚಿತ ಹಾಗೂ ಪಾರದರ್ಶಕತೆ ನ್ಯಾಯ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎನ್ನುವ ಹೇಳಿಕೆಯ ಬಗ್ಗೆ ಮೇಲ್ವಿಚಾರಣೆಯ ಬಗ್ಗೆ ಸಭೆ ಕರೆಯಲಾಗಿತ್ತು ಎಂದು ತಿಳಿಸಿದರು.

ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ತನ್ನ ಪ್ರತಿಕ್ರಿಯೆ ನೀಡಿತ್ತು.

Advertisements

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಇಮೇಲ್ ಮಾಡಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು.

ಜರ್ಮನಿ ಹೇಳಿಕೆ ನೀಡಿದ ನಂತರ ಭಾರತದ ಜರ್ಮನಿ ರಾಯಭಾರಿಯನ್ನು ಕರೆಸಿಕೊಂಡಿದ್ದ ಕೆಂದ್ರ ಸರ್ಕಾರ ತನ್ನ ಆಂತರಿಕ ವಿಷಯಗಳಲ್ಲಿ ತಲೆ ಹಾಕಿರುವುದರ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್ಚೇರ್ ಅವರು, ಕೇಜ್ರಿವಾಲರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.

”ನಾವು ನ್ಯಾಯಾಂಗ ಸ್ವಾತಂತ್ರ್ಯದ ಸಂಬಂಧಿಸಿದ ಮಾನದಂಡಗಳನ್ನು ನಿರೀಕ್ಷಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜಾಸತ್ತಾತ್ಮಕ ತತ್ವಗಳನ್ನು ಅಳವಡಿಸಬೇಕೆಂದು ಭಾವಿಸುತ್ತೇವೆ” ಎಂದು  ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದರು.

ಈ ಹೇಳಿಕೆಯ ನಂತರ ಭಾರತ ಸರ್ಕಾರವು ಜರ್ಮನಿ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥರಾದ ಜಾರ್ಜ್ ಎಂಜ್ವೇಲಿಯರ್ ಅವರನ್ನು ಕರೆಸಿಕೊಂಡು ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿತ್ತು.

”ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ಹಾಗೂ ನಮ್ಮ ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು” ಎಂದು ಭಾರತ ಖಂಡಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X