ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆ ಅಮಾನತುಗೊಳಿಸಿದ ಭಾರತ

Date:

Advertisements

ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆಯನ್ನು ಭಾರತ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ನೂತನ ನಿಯಮದ ಹಿನ್ನೆಲೆ ಗಡಿ ಪ್ರದೇಶದಲ್ಲಿ ವಾಸಿಸುವ ಮಯನ್ಮಾರ್ ಪ್ರಜೆಗಳು ಭಾರತಕ್ಕೆ ಆಗಮಿಸಬೇಕಾದರೆ ವಿಸಾ ಪ್ರಸ್ತುತಪಡಿಸಬೇಕು.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಗೃಹ ಇಲಾಖೆ ಭಾರತ ಹಾಗೂ ಮಯನ್ಮಾರ್ ನಡುವೆ ಮುಕ್ತ ಸಂಚಾರ ವ್ಯವಸ್ಥೆಯನ್ನು ದೇಶದ ಆಂತರಿಕ ಭದ್ರತೆ ಹಾಗೂ ಈಶಾನ್ಯ ಭಾರತದ ಭೌಗೋಳಿಕ ರಚನೆಯ ನಿರ್ವಹಣೆ ಹಿನ್ನೆಲೆಯಲ್ಲಿ ರದ್ದುಗೊಳಿಸಿದೆ. ಕೇಂದ್ರ ವಿದೇಶಾಂಗ ಇಲಾಖೆ ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಕೇಂದ್ರ ಗೃಹ ಇಲಾಖೆ ತತ್‌ಕ್ಷಣವೇ ಅಮಾನತುಗೊಳಿಸುವ ಶಿಫಾರಸ್ಸು ಕೈಗೊಂಡಿದೆ” ಎಂದು ತಿಳಿಸಿದ್ದಾರೆ.

ಕೆಂದ್ರ ಸರ್ಕಾರ ಗಡಿಯನ್ನು ರದ್ದುಗೊಳಿಸಲು ಕಳೆದ ತಿಂಗಳಿಂದಲೇ ಸಕ್ರಿಯ ಕಾರ್ಯಚರಣೆಯಲ್ಲಿ ತೊಡಗಿತ್ತು. ಮಣಿಪುರದ ಮುಖ್ಯಮಂತ್ರಿ ಎನ್‌ ಬಿರೇನ್ ಸಿಂಗ್ ಅವರು ಭಾರತ ಮಯನ್ಮಾರ್ ಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ಕೇಂದ್ರ ಗೃಹ ಇಲಾಖೆಗೆ ಆಗ್ರಹಿಸಿದ್ದರು. ಉಭಯ ದೇಶಗಳ ಮುಕ್ತ ಸಂಚಾರ ವ್ಯವಸ್ಥೆಯಿಂದಾಗಿಯೆ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿತ್ತು ಎಂದು ಆರೋಪಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

1970ರ ದಶಕದಿಂದಲೂ ಭಾರತ ಹಾಗೂ ಮಯನ್ಮಾರ್ ದೇಶಗಳ ನಡುವೆ ಮುಕ್ತ ಸಂಚಾರ ವ್ಯವಸ್ಥೆಯಿದೆ. ಉಭಯ ದೇಶಗಳ 16 ಕಿ.ಮೀ ಗಡಿಯಲ್ಲಿ ವಾಸಿಸುವ ಬುಡಕಟ್ಟು ಜನರ ಸಂಚಾರಕ್ಕಾಗಿ ಈ ವ್ಯವಸ್ಥೆ ಜಾರಿಯಲ್ಲಿತ್ತು. ಎರಡು ದೇಶಗಳ ಜನರು ವ್ಯವಹಾರ ಸಂಬಂಧ ಗುರುತಿನ ಚೀಟಿ ತೋರಿಸಿ ಗಡಿ ದಾಟಬೇಕಿತ್ತು. ಇದು ಒಂದು ವರ್ಷದವರೆಗೂ ಮಾನ್ಯವಾಗಿತ್ತು. ಹಾಗೆ ಬಂದ ಎರಡೂ ದೇಶಗಳ ನಾಗರಿಕರು ಒಂದು ಭೇಟಿಯಲ್ಲಿ ಎರಡು ವಾರಗಳ ಕಾಲ ಉಳಿದುಕೊಳ್ಳಬಹುದಿತ್ತು.

ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆ ಮಣಿಪುರ ಸರ್ಕಾರ 2020ರಲ್ಲಿ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿತ್ತು. ಫೆ.6 ರಂದು ಮಯನ್ಮಾರ್ ಗಡಿಗೆ ಹೊಂದಿಕೊಂಡ 1643 ಕಿ.ಮೀ ಪ್ರದೇಶದಲ್ಲಿ ತಂತಿ ಬೇಲಿ ಹಾಕುವುದಾಗಿ ಅಮಿತ್ ಶಾ ಘೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X