ಸತತ ಮೂರನೇ ವರ್ಷ ದೇಶದಲ್ಲಿ ಜೂನ್ ಮಳೆ ಪ್ರಮಾಣ ಶೇಕಡ 11ರಷ್ಟು ಕಡಿಮೆ

Date:

ಸತತ ಮೂರನೇ ವರ್ಷ ದೇಶದಲ್ಲಿ ಜೂನ್ ತಿಂಗಳ ಮಳೆಯ ಪ್ರಮಾಣವು ಸರಾಸರಿಗಿಂತ ಕಡಿಮೆಯಾಗಿದೆ. 2020ರಿಂದ ಜೂನ್ ಮಳೆ ಪ್ರಮಾಣ ಇಳಿಕೆಯಾಗುತ್ತಿದೆ. ನಿಖರವಾಗಿ ಒಂದು ತಿಂಗಳ ಹಿಂದೆ ಮಾನ್ಸೂನ್ ಆರಂಭವಾಗಿದ್ದು ಭಾರತದಲ್ಲಿ ಒಟ್ಟಾಗಿ 147.2 ಮಿಮೀ ಮಳೆ ಸುರಿದಿದೆ. ಇದು ಸಾಮಾನ್ಯಕ್ಕಿಂತ ಶೇಕಡ 11ರಷ್ಟು ಕಡಿಮೆಯಾಗಿದೆ.

ಇದು ಆರಂಭದ ತಿಂಗಳಾಗಿರುವ ಕಾರಣ ಮಾನ್ಸೂನ್ ಇಡೀ ಭಾರತದಲ್ಲಿರದು ಮತ್ತು ಸ್ವಲ್ಪ ಮಳೆಯ ಕೊರತೆ ಸಾಮಾನ್ಯವಾಗಿದೆ. ಜೂನ್ ಮಳೆಯು ದೇಶದ ಒಟ್ಟು ನೈಋತ್ಯ ಮಾನ್ಸೂನ್ ಕಾಲೋಚಿತ ಮಳೆ 880 ಮಿಲಿ ಮೀಟರ್‌ನ (1971-2020 ಡೇಟಾ) ಶೇಕಡ 15ರಷ್ಟಿದೆ.

ಈ ಸೀಸನ್‌ನಲ್ಲಿ ನೈಋತ್ಯ ಮಾನ್ಸೂನ್ ಮೇ 30ರಂದು ಕೇರಳವನ್ನು ತಲುಪಿದೆ. ಅದಾದ ಬಳಿಕ ಮಹಾರಾಷ್ಟ್ರದವರೆಗೂ ಆವರಿಸಿದೆ. ಮಹಾರಾಷ್ಟ್ರದಲ್ಲಿ ಜೂನ್ 9ರ ಸುಮಾರಿಗೆ ಮಾನ್ಸೂನ್ ಆರಂಭವಾಗಿದೆ. ಅದಾದ ಬಳಿಕ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಮಾನ್ಸೂನ್ ಆರಂಭಿಸಿದೆ.

ಆದರೆ ಉಳಿದಂತೆ ಹಲವಾರು ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿಯೂ ಭಾರೀ ತಾಪಮಾನ ಏರಿಕೆಯಾಗಿದೆ. ಬಿಸಿ ಗಾಳಿ, ತಾಪಮಾನ ಏರಿಕೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಜೂನ್‌ನಲ್ಲಿ, 17 ರಾಜ್ಯಗಳಿಂದ ಮಳೆಯ ಕೊರತೆಯಾಗಿದೆ. ಆದರೆ 19 ರಾಜ್ಯಗಳಲ್ಲಿ ಸಾಮಾನ್ಯ ಅಥವಾ ಹೆಚ್ಚಿನ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳು ತಿಳಿಸಿವೆ.

ಮುಂದಿನ ಎರಡು ಮೂರು ದಿನಗಳಲ್ಲಿ, ಮಾನ್ಸೂನ್ ತನ್ನ ಸಾಮಾನ್ಯ ದಿನವಾದ ಜುಲೈ 15ರಂದು ಇಡೀ ದೇಶದಲ್ಲಿ ಆವರಿಸುವ ಸಾಧ್ಯತೆಯಿದೆ.

ಇನ್ನು ಭಾರೀ ತಾಪಮಾನ ಏರಿಕೆಯಿಂದ ಜನರು ತತ್ತರಿಸಿದ್ದ ದೆಹಲಿಯಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬಿಹಾರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜುಲೈ 3 ಮತ್ತು 4ರಂದು ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಐಎಂಡಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ...

ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ...

Download Eedina App Android / iOS

X