ದೇಶದ ಅತ್ಯಂತ ಕಿರಿಯ ಪೈಲಟ್ ಆದ ವಿಜಯಪುರದ ಸಮೈರಾ

Date:

Advertisements

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆಗುವ ಮೂಲಕ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ.

18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಲೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.

ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣೆಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಸಾಧನೆ ಪ್ರೇರಣೆ ಆಗಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X