ಕೇರಳ | ಮೆದುಳು ತಿನ್ನುವ ಅಮೀಬಾದಿಂದ 5 ವರ್ಷದ ಬಾಲಕಿ ಸಾವು

Date:

Advertisements

ಕಲುಷಿತ ನೀರಿನಲ್ಲಿ ಕಂಡು ಬರುವ ಅಪರೂಪವಾಗಿ ಮನುಷ್ಯರ ಮೆದುಳಿಗೆ ಹಾನಿಗೊಳಿಸುವ ಅಮೀಬಾ ದಿಂದ 5 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಂದು ನಡೆದಿದೆ.

ಮಲಪ್ಪುರಂ ಜಿಲ್ಲೆಯ ಮುನ್ನಿಯೂರ್‌ ಪಂಚಾಯತ್‌ ವ್ಯಾಪ್ತಿಯ ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಆರೋಗ್ಯ ಕೇಂದ್ರದಲ್ಲಿ ವಾರದ ಹಿಂದೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 5 ವರ್ಷದ ಬಾಲಕಿ ಸೋಮವಾರ(ಮೇ.20) ಮೃತಪಟ್ಟಿದ್ದಳು.

ವೈದ್ಯಕೀಯ ಪರಿಣಿತರ ಪ್ರಕಾರ ಈ ಬಾಲಕಿ ಮೆದುಳಿಗೆ ಹಾನಿಗೊಳಿಸುವ ಪರಾವಲಂಬಿಯಲ್ಲದ ಜೀವಂತ ಅಮೀಬಾ ಬ್ಯಾಕ್ಟೀರಿಯಾ ಕಲುಷಿತ ನೀರಿನಿಂದ ಮೂಗಿನೊಳಗೆ ಪ್ರವೇಶಿಸಿ ಬಾಲಕಿಯ ಮೆದುಳನ್ನು ಹಾನಿಗೊಳಿಸಿದೆ.

Advertisements

ಮೃತ ಬಾಲಕಿ ಮೇ. 1 ಹಾಗೂ ಮೇ 10 ರಂದು ತನ್ನ ಮನೆಯ ಹತ್ತಿರದ ಕೊಳದಲ್ಲಿ ಆಟವಾಡಿದ್ದಾಳೆ. ನಂತರದಲ್ಲಿ ಜ್ವರ, ತಲೆನೋವು, ವಾಂತಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಕೋವ್ಯಾಕ್ಸಿನ್ ಲಸಿಕೆ ಪಡೆದ ವರ್ಷದ ನಂತರ ಶೇ.30 ಮಂದಿಗೆ ಆರೋಗ್ಯ ಸಮಸ್ಯೆಗಳು

ಆಸ್ಪತ್ರೆಗೆ ದಾಖಲಿಸಿದ ನಂತರ ಬಾಲಕಿಯನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಬಾಲಕಿ ಆಟವಾಡಿದ ಕೊಳದಲ್ಲಿಯೇ ಇತರ ಕೆಲವು ಮಕ್ಕಳು ಆಟವಾಡಿದ್ದಾರೆ, ಇವರನ್ನು ಕೂಡ ಆರೋಗ್ಯ ತಪಾಸಣೆಯಲ್ಲಿ ಇಡಲಾಗಿತ್ತು. ತದ ನಂತರ ಮೆದುಳಿಗೆ ಹಾನಿಗೊಳಿಸುವ ಯಾವುದೇ ರೋಗಗಳು ಕಂಡುಬರದ ಕಾರಣ ಆಸ್ಪತ್ರೆಯಿಂದ ಈ ಮಕ್ಕಳನ್ನು ಬಿಡುಗಡೆಗೊಳಿಸಲಾಗಿದೆ.

ಮೆದುಳಿಗೆ ಹಾನಿಗೊಳಿಸುವ ಜೀವಂತ ಅಮೀಬಾ ರೋಗವು ಅಲಪ್ಪುಳ ಜಿಲ್ಲೆಯಲ್ಲಿ 2017 ಹಾಗೂ 2023 ರಲ್ಲಿ ವರದಿಯಾಗಿದ್ದವು.

ಜ್ವರ, ತಲೆನೋವು, ವಾಂತಿ ಹಾಗೂ ಸೀನುವಿಕೆ ಈ ರೋಗದ ಪ್ರಮುಖ ಲಕ್ಷಣವಾಗಿದೆ. ಜೀವಂತವಿರುವ ಅಮೀಬಾ ಬ್ಯಾಕ್ಟೀರಿಯಾ ಮೂಗಿನ ಮೂಲದ ದೇಹವನ್ನು ಪ್ರವೇಶಿಸಿ ಮೆದುಳನ್ನು ತಿನ್ನುತ್ತವೆ. ತುರ್ತು ವೈದ್ಯಕೀಯ ಚಿಕಿತ್ಸೆ ಹೊರತುಪಡಿಸಿ ಬಹುತೇಕ ಸಂದರ್ಭಗಳಲ್ಲಿ ಅಮೀಬಾ ಮೆದುಳು ಪ್ರವೇಶಿಸಿದ ನಂತರ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X