ತಮಿಳುನಾಡು | ಪ್ರಧಾನಿ ಮೋದಿ ರೋಡ್‌ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡ ಬಿಜೆಪಿ: ತನಿಖೆಗೆ ಆದೇಶ

Date:

ಪ್ರಧಾನಿ ನರೇಂದ್ರ ಮೋದಿಯವರು ಮಾ.18ರಂದು ತಮಿಳುನಾಡಿನ ಪ್ರವಾಸದ ವೇಳೆ ಕೊಯಂಬತ್ತೂರಿನಲ್ಲಿ ಆಯೋಜಿಸಿದ್ದ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡಿರುವುದು ಈಗ ಸದ್ಯ ವಿವಾದಕ್ಕೆ ಕಾರಣವಾಗಿದೆ. ಇದು ಸುದ್ದಿಯಾಗುತ್ತಿದ್ದಂತೆಯೇ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.

- Advertisement -

ಈ ಬಗ್ಗೆ ವರದಿ ಮಾಡಿದ್ದ ದಿ ಹಿಂದೂ, ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬಾರದು ಎಂಬ ನಿಷೇಧವಿದೆ. ಇದರ ಹೊರತಾಗಿಯೂ ಸುಮಾರು 50 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಕೊಯಂಬತ್ತೂರಿನಲ್ಲಿ ಸೋಮವಾರ ನಡೆದ ಪ್ರಧಾನಿ ಮೋದಿಯವರ ರೋಡ್‌ಶೋನಲ್ಲಿ ಬಳಸಿಕೊಳ್ಳಲಾಗಿತ್ತು. ಶಾಲಾ ಮಕ್ಕಳು ತಮ್ಮ ಶಿಕ್ಷಕರೊಂದಿಗೆ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಶಾಲೆಯಿಂದ ನಿರ್ದೇಶನ ನೀಡಲಾಗಿತ್ತು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ವರದಿ ಪ್ರಕಟಗೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದ ಮೂಲಕ ಮಾಹಿತಿ ನೀಡಿರುವ ಕೊಯಂಬತ್ತೂರು ಜಿಲ್ಲಾಧಿಕಾರಿ ಕ್ರಾಂತಿ ಕುಮಾರ್ ಪಟಿ, “ಈ ಬಗ್ಗೆ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಲು ಆದೇಶಿಸಿದ್ದೇವೆ. ಎಆರ್‌ಎ ಅವರು ಮುಖ್ಯ ಶಿಕ್ಷಣಾಧಿಕಾರಿ ಮತ್ತು ಕಾರ್ಮಿಕ ಇಲಾಖೆ ಜಂಟಿ ಆಯುಕ್ತರಿಂದ ವರದಿ ಕೇಳಿದ್ದಾರೆ. ವಿಚಾರಣೆಯ ಫಲಿತಾಂಶಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಅಲ್ಲದೇ, ಈ ಬೆಳವಣಿಗೆಯ ಬಗ್ಗೆ ಸಹಾಯಕ ಚುನಾವಣಾಧಿಕಾರಿ ಪಿ ಸುರೇಶ್‌ ಪ್ರತಿಕ್ರಿಯಿಸಿದ್ದು, “ಈ ರೀತಿಯ ಪದ್ಧತಿಗಳು ನೀತಿ ಸಂಹಿತೆಯ ಉಲ್ಲಂಘನೆಯಾಗಿವೆ. ತನಿಖೆ ಪೂರ್ಣಗೊಂಡ ನಂತರ ವರದಿಗಳನ್ನು ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದಿದ್ದಾರೆ.

ಪ್ರಧಾನಿಯ ರೋಡ್‌ ಶೋ ಸೋಮವಾರ ನಡೆದಾಗ ಹಲವಾರು ಶಾಲಾ ಮಕ್ಕಳು ಅದನ್ನು ವೀಕ್ಷಿಸಲು ಆಗಮಿಸಿದ್ದರು.ಇವರ ಪೈಕಿ 14 ವರ್ಷಕ್ಕಿಂತ ಕಿರಿಯ ಮಕ್ಕಳು ಹನುಮಂತನ ವೇಷ ಧರಿಸಿರುವುದು ಹಾಗೂ ಪಕ್ಷದ ಚಿಹ್ನೆ ಇರುವ ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ರೋಡ್‌ ಶೋ ಹಾದು ಹೋಗುವ ವಿವಿಧೆಡೆ ನಿಂತಿರುವುದು ಕಾಣಿಸಿದೆ.

ಇದನ್ನು ಓದಿದ್ದೀರಾ? ಉ. ಪ್ರದೇಶ | ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು!

ಅಲ್ಲದೇ, ಬಿಜೆಪಿ ಕಾರ್ಯಕರ್ತರು ಸಿದ್ಧಪಡಿಸಿದ್ದ ವೇದಿಕೆಗಳಲ್ಲಿ ಪ್ರದರ್ಶನ ನೀಡುತ್ತಿರುವ ವಿಡಿಯೋಗಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂಬ ಸ್ಪಷ್ಟ ನಿರ್ದೇಶನವನ್ನು ಚುನಾವಣಾ ಆಯೋಗ ಹೊರಡಿಸಿದೆ. ಮಕ್ಕಳನ್ನು ಬಳಸಿಕೊಂಡರೆ ಅದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...