ತಮಿಳುನಾಡು | ಪ್ರಧಾನಿ ಮೋದಿ ರೋಡ್‌ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡ ಬಿಜೆಪಿ: ತನಿಖೆಗೆ ಆದೇಶ

Date:

Advertisements

ಪ್ರಧಾನಿ ನರೇಂದ್ರ ಮೋದಿಯವರು ಮಾ.18ರಂದು ತಮಿಳುನಾಡಿನ ಪ್ರವಾಸದ ವೇಳೆ ಕೊಯಂಬತ್ತೂರಿನಲ್ಲಿ ಆಯೋಜಿಸಿದ್ದ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡಿರುವುದು ಈಗ ಸದ್ಯ ವಿವಾದಕ್ಕೆ ಕಾರಣವಾಗಿದೆ. ಇದು ಸುದ್ದಿಯಾಗುತ್ತಿದ್ದಂತೆಯೇ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವರದಿ ಮಾಡಿದ್ದ ದಿ ಹಿಂದೂ, ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬಾರದು ಎಂಬ ನಿಷೇಧವಿದೆ. ಇದರ ಹೊರತಾಗಿಯೂ ಸುಮಾರು 50 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಕೊಯಂಬತ್ತೂರಿನಲ್ಲಿ ಸೋಮವಾರ ನಡೆದ ಪ್ರಧಾನಿ ಮೋದಿಯವರ ರೋಡ್‌ಶೋನಲ್ಲಿ ಬಳಸಿಕೊಳ್ಳಲಾಗಿತ್ತು. ಶಾಲಾ ಮಕ್ಕಳು ತಮ್ಮ ಶಿಕ್ಷಕರೊಂದಿಗೆ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಶಾಲೆಯಿಂದ ನಿರ್ದೇಶನ ನೀಡಲಾಗಿತ್ತು” ಎಂದು ತಿಳಿಸಿದೆ.

ಈ ವರದಿ ಪ್ರಕಟಗೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದ ಮೂಲಕ ಮಾಹಿತಿ ನೀಡಿರುವ ಕೊಯಂಬತ್ತೂರು ಜಿಲ್ಲಾಧಿಕಾರಿ ಕ್ರಾಂತಿ ಕುಮಾರ್ ಪಟಿ, “ಈ ಬಗ್ಗೆ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಲು ಆದೇಶಿಸಿದ್ದೇವೆ. ಎಆರ್‌ಎ ಅವರು ಮುಖ್ಯ ಶಿಕ್ಷಣಾಧಿಕಾರಿ ಮತ್ತು ಕಾರ್ಮಿಕ ಇಲಾಖೆ ಜಂಟಿ ಆಯುಕ್ತರಿಂದ ವರದಿ ಕೇಳಿದ್ದಾರೆ. ವಿಚಾರಣೆಯ ಫಲಿತಾಂಶಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಅಲ್ಲದೇ, ಈ ಬೆಳವಣಿಗೆಯ ಬಗ್ಗೆ ಸಹಾಯಕ ಚುನಾವಣಾಧಿಕಾರಿ ಪಿ ಸುರೇಶ್‌ ಪ್ರತಿಕ್ರಿಯಿಸಿದ್ದು, “ಈ ರೀತಿಯ ಪದ್ಧತಿಗಳು ನೀತಿ ಸಂಹಿತೆಯ ಉಲ್ಲಂಘನೆಯಾಗಿವೆ. ತನಿಖೆ ಪೂರ್ಣಗೊಂಡ ನಂತರ ವರದಿಗಳನ್ನು ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದಿದ್ದಾರೆ.

ಪ್ರಧಾನಿಯ ರೋಡ್‌ ಶೋ ಸೋಮವಾರ ನಡೆದಾಗ ಹಲವಾರು ಶಾಲಾ ಮಕ್ಕಳು ಅದನ್ನು ವೀಕ್ಷಿಸಲು ಆಗಮಿಸಿದ್ದರು.ಇವರ ಪೈಕಿ 14 ವರ್ಷಕ್ಕಿಂತ ಕಿರಿಯ ಮಕ್ಕಳು ಹನುಮಂತನ ವೇಷ ಧರಿಸಿರುವುದು ಹಾಗೂ ಪಕ್ಷದ ಚಿಹ್ನೆ ಇರುವ ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ರೋಡ್‌ ಶೋ ಹಾದು ಹೋಗುವ ವಿವಿಧೆಡೆ ನಿಂತಿರುವುದು ಕಾಣಿಸಿದೆ.

ಇದನ್ನು ಓದಿದ್ದೀರಾ? ಉ. ಪ್ರದೇಶ | ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು!

ಅಲ್ಲದೇ, ಬಿಜೆಪಿ ಕಾರ್ಯಕರ್ತರು ಸಿದ್ಧಪಡಿಸಿದ್ದ ವೇದಿಕೆಗಳಲ್ಲಿ ಪ್ರದರ್ಶನ ನೀಡುತ್ತಿರುವ ವಿಡಿಯೋಗಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂಬ ಸ್ಪಷ್ಟ ನಿರ್ದೇಶನವನ್ನು ಚುನಾವಣಾ ಆಯೋಗ ಹೊರಡಿಸಿದೆ. ಮಕ್ಕಳನ್ನು ಬಳಸಿಕೊಂಡರೆ ಅದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X