ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

Date:

Advertisements
  • 11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆ
  • ತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾ

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್‌ ಪಿ ಟಿ ಉಷಾ ತಮ್ಮ ವರಸೆ ಬದಲಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ  ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಉಷಾ, ಬುಧವಾರ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ.

“ನಾನು ಮೊದಲು ಕ್ರೀಡಾಪಟು ಆ ಬಳಿಕ ಆಡಳಿತಾಧಿಕಾರಿ” ಎಂದು ಹೇಳುವ ಮೂಲಕ ಕುಸ್ತಿಪಟುಗಳ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.  

Advertisements

ಬೃಜ್‌ ಭೂಷಣ್‌ರನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟುಗಳು ತಮ್ಮ ದೃಢನಿರ್ಧಾರವನ್ನು ತಿಳಿಸಿದ್ದು, ರಾಜಧಾನಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರತಿಭಟನೆ ಅಶಿಸ್ತು ಎಂದಿದ್ದ ಉಷಾ

ಕೆಲ ದಿನಗಳ ಹಿಂದೆ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ್ದ ಉಷಾ, “ಕುಸ್ತಿಪಟುಗಳದ್ದು ನಕಾರಾತ್ಮಕ ಧೋರಣೆ, ಪ್ರತಿಭಟನೆಯು ಅಶಿಸ್ತಿನ ವರ್ತನೆ” ಎಂದು ಹೇಳಿದ್ದರು.

ಆದರೆ, ಹಿರಿಯ ಅಥ್ಲೀಟ್‌ ಆಗಿರುವ ಉಷಾ, ಕ್ರೀಡಾಪಟುಗಳ ಬೆಂಬಲಕ್ಕೆ ನಿಲ್ಲುವ ಬದಲು ಅವರ ವಿರುದ್ಧವೇ ಹೇಳಿಕೆ ನೀಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಉಷಾ ಜೊತೆಗಿನ ಮಾತುಕತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಸ್ತಿಪಟು ಭಜರಂಗ್‌ ಪುನಿಯಾ, “ಉಷಾ ಅವರು ನಮ್ಮ ಜೊತೆಗಿರುವುದನ್ನು ತಿಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಸಮಸ್ಯೆ ಪರಿಹಾರದ ಕುರಿತು ಅವರು ಯಾವುದೇ ಭರವಸೆ ನೀಡಿಲ್ಲ. ಹೀಗಾಗಿ ನಮಗೆ ನ್ಯಾಯ ಸಿಗುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ನಾವು ಅವರಿಗೆ ತಿಳಿಸಿದ್ದೇವೆ” ಎಂದು  ಪುನಿಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?:

ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

“ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆ ಕ್ರೀಡಾ ಕ್ಷೇತ್ರಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಈ ಹಿಂದೆ ಪಿ ಟಿ ಉಷಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X