ಐಪಿಎಲ್‌ 2025 | ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ ಮಾಜಿ ಆಟಗಾರ

Date:

Advertisements

2025ರ ಐಪಿಎಲ್ ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ ತಂಡದ ಮಾಜಿ ಆಟಗಾರ ಸುಬ್ರಮಣಿಯಂ ಬದ್ರಿನಾಥ್ ಅವರ ಮೀಮ್ಸ್‌ಅನ್ನು ಸೃಷ್ಟಿಸಿ, ಹಂಚಿಕೊಂಡು ಆರ್‌ಸಿಬಿ ಕಾಲೆಳೆದಿದ್ದಾರೆ.

ಬದ್ರಿನಾಥ್ ಅವರು ಮೀಮ್ಅನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆರ್‌ಸಿಬಿಯನ್ನು ಅಣಕಿಸಿದ್ದಾರೆ. ಮೀಮ್ಸ್‌ನಲ್ಲಿ ಬದ್ರಿನಾಥ್ ಅವರೂ ಕೂಡ ಸಿಎಸ್‌ಕೆ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಸರದಿಯಲ್ಲಿ ನಿಂತಿರುವ ಇತರ ತಂಡಗಳ ಪ್ರತಿನಿಧಿಗಳೊಂದಿಗೆ ಕೈಕುಲುಕುವುದು ಮತ್ತು ಕೆಲವರನ್ನು ಅಪ್ಪಿಕೊಳ್ಳುವುದನ್ನು ಮಾಡಿದ್ದಾರೆ. ಆದರೆ, ಆರ್‌ಸಿಬಿ ಪ್ರತಿನಿಧಿಯನ್ನು ಆಲಿಂಗಿಸುವ ಸರದಿ ಬಂದಾಗ, ಬದ್ರಿನಾಥ್ ಅವರು ಆರ್‌ಸಿಬಿಯನ್ನು ನಿರ್ಲಕ್ಷಿಸಿ ಇನ್ನೊಂದು ತಂಡದತ್ತ ಸಾಗುತ್ತಾರೆ.

ಬದ್ರಿನಾಥ್ ಅವರ ಮೀಮ್ಸ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ವಿರುದ್ಧ ಆರ್‌ಸಿಬಿ ಅಭಿಮಾನಿಗಳು ಸಿಟ್ಟಾಗಿದ್ದಾರೆ.

Advertisements

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯವನ್ನು ಪ್ರತಿಷ್ಠೆಯ ಪಂದ್ಯವನ್ನಾಗಿ ಉಭಯ ತಂಡಗಳ ಅಭಿಮಾನಿಗಳು ಮಾಡಿದ್ದಾರೆ. ಇದರಲ್ಲಿ ಈ ತಂಡಗಳ ಕೆಲವು ಆಟಗಾರರ ಪಾತ್ರವೂ ಇದೆ. ಆರ್‌ಸಿಬಿ ತನ್ನ ಚೊಚ್ಚಲ ಕಪ್ ಗೆಲ್ಲಲು ಕಸರತ್ತು ನಡೆಸುತ್ತಿದೆ. ಐದು ಬಾರಿ ಕಪ್‌ ಗೆದ್ದಿರುವ ಸಿಎಸ್‌ಕೆ ಮತ್ತೊಂದು ಕಪ್‌ ಗೆಲ್ಲಲು ತವಕಿಸುತ್ತಿದೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ಎರಡು ಪಂದ್ಯಗಳು ನಡೆಯಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X