‘2ನೇ ಮದುವೆ’ ಆಗಿದ್ದಕ್ಕೆ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ

Date:

Advertisements

ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನ ಕೇಡರ್‌ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ ಕಾಲ ಯಾವುದೇ ಬಡ್ತಿ (ಪ್ರಮೋಷನ್) ನೀಡದಂತೆ ನಿರ್ಬಂಧಿಸಲಾಗಿದೆ. ಅವರನ್ನು ಲೆವೆಲ್ 11 ಸೀನಿಯರ್ ವೇತನ ಶ್ರೇಣಿಯಿಂದ ಲೆವೆಲ್ 10 ಜೂನಿಯರ್ ವೇತನ ಶ್ರೇಣಿಗೆ ಹಿಂಬಡ್ತಿ ನೀಡಲಾಗಿದೆ. ಲೆವೆಲ್ 10 ಶ್ರೇಣಿಯು ಹೊಸದಾಗಿ ನೇಮಕಗೊಂಡ ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸುವ ಶ್ರೇಣಿಯಾಗಿದೆ.

ರಾಜಸ್ಥಾನದಲ್ಲಿ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ ನೀಡಿರುವುದು ಇದೇ ಮೊದಲು ಎಂದು ವರದಿಯಾಗಿದೆ. ಚೌಧರಿ ಅವರ ಎರಡನೇ ಮದುವೆಯ ಬಗ್ಗೆ ತಿಳಿದ ನಂತರ ಉನ್ನತ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

Advertisements

ಚೌದರಿ ಅವರು ಕೆಲವು ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡದೆ, ಇನ್ನೊಬ್ಬ ಮಹಿಳೆಯನ್ನು ವಿವಾಹವಾಗಿದ್ದರು. ಈ ಕೌಟುಂಬಿಕ ಪ್ರಕರಣವು ಸುಮಾರು ನಾಲ್ಕು ವರ್ಷಗಳ ಹಿಂದೆ ಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ಚೌದರಿ ಪರವಾಗಿಯೇ ತೀರ್ಪು ನೀಡಿದ್ದವು ಎಂದು ವರದಿಯಾಗಿದೆ.

ಆದಾಗ್ಯೂ, ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಚೌಧರಿ 2009ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಜೈಪುರದಲ್ಲಿ ಸಮುದಾಯ ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಅವರ ಹುದ್ದೆಯನ್ನು ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಶ್ರೇಣಿ 10) ಎಂದು ಬದಲಾಯಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X