ಲಿಂಗ ಪರಿವರ್ತನೆ ಮಾಡಿಸಿಕೊಂಡ ಐಆರ್‌ಎಸ್‌ ಅಧಿಕಾರಿ

Date:

Advertisements

ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಇಂತಹದೊಂದು ಬೆಳವಣಿಗೆ ಭಾರತೀಯ ನಾಗರಿಕ ಸೇವೆಗಳಲ್ಲಿ ಮೊದಲ ಬಾರಿಗೆ ಸಂಭವಿಸಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಹೇಳಲಾಗಿದೆ.

ಹೈದರಾಬಾದ್‌ನ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (CESTAT) ಪ್ರಾದೇಶಿಕ ಪೀಠದ ಜಂಟಿ ಆಯುಕ್ತರಾಗಿರುವ ಮಹಿಳಾ ಐಆರ್‌ಎಸ್‌ ಅಧಿಕಾರಿ ಎಂ ಅನುಸೂಯಾ ಅವರು ಲಿಂಗ ಪರಿವರ್ತನೆ ಮಾಡಿಸಿಕೊಂಡು ತಮ್ಮ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಿಕೊಂಡಿದ್ದಾರೆ.

ಸರ್ಕಾರವು ಅವರ ದಾಖಲೆಗಳಲ್ಲಿ ಅವರ ಹೆಸರು ಮತ್ತು ಲಿಂಗವನ್ನು ತಿದ್ದುಪಡಿ ಮಾಡಿಕೊಂಡಿದೆ. ಇದೀಗ, ಅವರು ಪುರಷ ನಾಗರಿಕ ಸೇವಾ ಅಧಿಕಾರಿಯಾಗಿದ್ದಾರೆ. ಭಾರತದ ನಾಗರಿಕ ಸೇವೆಗಳ ಇತಿಹಾಸದಲ್ಲಿ ಲಿಂಗ ಪರಿವರ್ತನೆ ಮಾಡಿಸಿಕೊಂಡ ಮೊದಲ ಅಧಿಕಾರಿ ಎನಿಸಿಕೊಂಡಿದ್ದಾರೆ.

Advertisements

“2013ನೇ ಬ್ಯಾಚ್‌ನ ಐಆರ್‌ಎಸ್‌ ಅಧಿಕಾರಿ ಎಂ ಅನುಸೂಯ ಅವರು ಪ್ರಸ್ತುತ ಹೈದರಾಬಾದ್‌ನ ಸಿಇಎಸ್‌ಟಿಎಟಿಯಲ್ಲಿ ಜಂಟಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಪುರುಷನಾಗಿ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದು, ಅವರ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಿಕೊಂಡಿದ್ದಾರೆ” ಎಂದು ಕೇಂದ್ರ ಹಣಕಾಸು ಸಚಿವಾಲಯವು ತನ್ನ ಆದೇಶದಲ್ಲಿ ಹೇಳಿದೆ.

 

“ಅನುಸೂಯ ಅವರ ಮನವಿಯನ್ನು ಪುರಸ್ಕರಿಸಲಾಗಿದೆ. ಇನ್ನು ಮುಂದೆ ಎಲ್ಲ ದಾಖಲೆಗಳಲ್ಲಿ ಅವರ ಹೆಸರನ್ನು ಎಂ ಅನುಕಾಂತಿರ್ ಸೂರ್ಯ ಎಂದು ಬದಲಿಸಲಾಗುತ್ತಿದೆ” ಎಂದು ಸಿಇಎಸ್‌ಟಿಎಟಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X