ಕೋಳಿ ವಿಚಾರದಲ್ಲಿ ಹೊಸ ಪ್ರಶ್ನೆ ಉದ್ಭವ : ‘ಕೋಳಿ ಪ್ರಾಣಿಯೋ-ಪಕ್ಷಿಯೋ’

Date:

Advertisements
  • ಗುಜರಾತ್ ಹೈಕೋರ್ಟ್‌ನಲ್ಲಿ ಪಿಐಎಲ್
  • ಕೋಳಿ ಅಂಗಡಿ ಮುಚ್ಚುವಂತೆ ಆದೇಶ

ಚಿಕ್ಕ ಮಕ್ಕಳಿಂದಿಡಿದು ದೊಡ್ಡವರವರೆಗೂ ಎಲ್ಲರೂ ಒಂದಲ್ಲೊಂದು ಸಂದರ್ಭದಲ್ಲಿ ‘ಕೋಳಿ ಮೊದಲೋ-ಮೊಟ್ಟೆ ಮೊದಲೋ’ ಎಂಬ ಪ್ರಶ್ನೆ ಕೇಳಿರುತ್ತಾರೆ. ಈಗ ಆ ಪ್ರಶ್ನೆ ಹಳತಾಗುತ್ತಿದೆ. ಆ ಪ್ರಶ್ನೆಯನ್ನು ಕೇಳುವವರ ಸಂಖ್ಯೆಯೂ ಕಡಿಮೆಯಾಗಿದೆ. ಬದಲಾಗಿ, ಹೊಸ ಪ್ರಶ್ನೆಯೊಂದು ಮುನ್ನೆಲೆಗೆ ಬಂದಿದೆ. ‘ಕೋಳಿ ಪ್ರಾಣಿಯೋ ಅಥವಾ ಪಕ್ಷಿಯೋ’ ಎಂಬುದು ಹೊಸ ಗೊಂದಲವನ್ನು ಹುಟ್ಟುಹಾಕಿದೆ.

ಮಾಂಸದ ಅಂಗಡಿಗಳಲ್ಲಿ ಕೋಳಿಯನ್ನು ಕೊಲ್ಲಬಾರದು, ಕಸಾಯಿಖಾನೆಯಲ್ಲಿ ಮಾತ್ರವೇ ಕೊಲ್ಲಬೇಕೆಂದು ಗುಜರಾತ್‌ ಹೈಕೋರ್ಟ್‌ನಲ್ಲಿ ಅಲ್ಲಿನ ಪ್ರಾಣಿ ದಯಾಸಂಘ ಮತ್ತು ಅಹಿಂಸಾ ಮಹಾಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದೆ. ಕಸಾಯಿಖಾನೆಗಳ ಸರಿಯಾದ ಕಾರ್ಯನಿರ್ವಹಣೆಗೆ ವಿವಿಧ ಕಾನೂನುಗಳು ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಅರ್ಜಿದಾರರು ವಾದಿಸಿದ್ದಾರೆ. ಬುಧವಾರ ಆ ಅರ್ಜಿ ವಿಚಾರಣೆ ನಡೆಸಿದ್ದು, ಈ ವೇಳೆ ‘ಕೋಳಿ ಪ್ರಾಣಿಯಾ-ಪಕ್ಷಿಯಾ’ ಎಂಬ ಪ್ರಶ್ನೆ ಉದ್ಭವಿಸಿತ್ತು. ಕೋರ್ಟ್‌ ಅಂಗಳದಲ್ಲಿ ಸ್ತಬ್ಧತೆ ಉಂಟುಮಾಡಿತ್ತು.

ಪ್ರಾಣಿ ದಯಾ ಸಂಘದ ಅರ್ಜಿಯ ವಿರುದ್ಧ ಕೋಳಿ ವ್ಯಾಪಾರಿಗಳು ಮತ್ತು ಕೋಳಿ ಅಂಗಡಿ ಮಾಲೀಕರು ‘ಪ್ರತಿ ಅರ್ಜಿ’ ಸಲ್ಲಿಸಿದ್ದಾರೆ. ತಮ್ಮ ಅಂಗಡಿಗಳನ್ನು ತೆರೆಯುವಂತೆ ಕೋರ್ಟ್‌ ಮುಂದೆ ಮನವಿ ಮಾಡಿದ್ದಾರೆ. ಆದರೆ, ಕೋಳಿ ಮಾಂಸದ ಅಂಗಡಿಗಳಲ್ಲಿ ನೈರ್ಮಲ್ಯ ಮಾನದಂಡಗಳನ್ನು ಅನುಸರಿಸದ ಕಾರಣ ಮಾಂಸ ಮತ್ತು ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಹೈಕೋರ್ಟ್ ಆದೇಶಿಸಿದೆ.

ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ಹಲವಾರು ಸ್ಥಳೀಯ ಸಂಸ್ಥೆಗಳು, “ಕೋಳಿಗಳು ಮತ್ತು ಪ್ರಾಣಿಗಳನ್ನು ಕಸಾಯಿಖಾನೆಗಳಲ್ಲಿ ಕೊಲ್ಲಬೇಕು. ಅಂಗಡಿಗಳಲ್ಲಿ ಕೊಲ್ಲಬಾರದು” ಎಂದು ಹೇಳಿಕೊಂಡು ಹಲವಾರು ಅಂಗಡಿಗಳನ್ನು ಮುಚ್ಚಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X