“ಸರ್ಕಾರ್ ತೋ ಗಯೀ ಹುಯೀ ಹೇ”: ಕಾಶ್ಮೀರ ದಾಳಿಯಲ್ಲಿ ತಂದೆಯನ್ನು ಕಳೆದುಕೊಂಡ ಬಾಲಕನ ಪ್ರಶ್ನೆ

Date:

Advertisements

ಪಹಲ್ಗಾಮ್ ಉಗ್ರಗಾಮಿಗಳ ದಾಳಿಯ ಹೃದಯ ವಿದ್ರಾವಕ ಘಟನೆ ದೇಶಾದ್ಯಂತ ಹಲವರ ಆತ್ಮಪ್ರಜ್ಞೆಯನ್ನು ಕಲಕಿದರೆ, ಘಟನೆಯಲ್ಲಿ ತಂದೆಯನ್ನು ಕಳೆದುಕೊಂಡ ಸೂರತ್ ನ ಪುಟ್ಟ ಬಾಲಕನೊಬ್ಬ ಪ್ರದರ್ಶಿಸಿರುವ ಧೈರ್ಯ ದೇಶದ ಗಮನ ಸೆಳೆದಿದೆ.

ಸೂರತ್ನ ವರ್ಚಾ ಪ್ರದೇಶದ ಶೈಲೇಶ್ ಕಲ್ತಿಯಾ ಅವರ ಪುತ್ರ ನಕ್ಷ್ ಕಲ್ತಿಯಾ ತನ್ನ ಆಘಾತವನ್ನು ಹಂಚಿಕೊಂಡಿರುವುದು ಮಾತ್ರವಲ್ಲದೇ, ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಕಡೆಗಣಿಸಿರುವ ಗಂಭೀರ ಭದ್ರತಾ ಲೋಪವನ್ನು ಪ್ರಶ್ನಿಸಿದ್ದಾನೆ.
ಎಎನ್ಐ ಪ್ರಸಾರ ಮಾಡಿರುವ ವಿಡಿಯೊ ತುಣುಕು ಇದೀಗ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಮಿನಿ ಸ್ವಿಡ್ಜರ್ಲೆಂಡ್ ಎನಿಸಿದ ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಘಟನೆಯ ಭಯಾನಕ ಅನುಭವವನ್ನು ಈ ವಿಡಿಯೊದಲ್ಲಿ ಮೆಲುಕು ಹಾಕಿದ್ದಾನೆ.

ಘಟನೆಯಲ್ಲಿ ಈ ಪುಟ್ಟ ಬಾಲಕ ತಂದೆಯನ್ನು ಕಳೆದುಕೊಂಡಿದ್ದ. ಆತನ ಮಾತುಗಳಲ್ಲಿ ಕೇವಲ ನೋವಿನ ಛಾಯೆ ಮಾತ್ರ ಇರುವುದಲ್ಲ; ಬದಲಾಗಿ ಮಾತಿನ ಸ್ಪಷ್ಟತೆ ಮತ್ತು ಧೈರ್ಯವನ್ನು ಜಾಲತಾಣಗಳಲ್ಲಿ ವ್ಯಾಪಕವಾಗಿ ಶ್ಲಾಘಿಸಲಾಗುತ್ತಿದ್ದು,
“ಚುನಾಯಿತ ಪ್ರತಿನಿಧಿಗಳಿಗಿಂತ ಹೆಚ್ಚು ಪ್ರಜ್ಞಾಪೂರ್ವಕ ಮತ್ತು ಸದ್ದು ಕಳೆದುಕೊಂಡಿರುವ ಮಾಧ್ಯಮಗಳಿಗಿಂತ ಗಟ್ಟಿಧ್ವನಿ” ಎಂದು ನೆಟ್ಟಿಗರು ಬಣ್ಣಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು

ಭದ್ರತಾ ವೈಫಲ್ಯದ ಹಿನ್ನೆಲೆಯಲ್ಲಿ ಸರ್ಕಾರದ ಬಗ್ಗೆ ಏನಾದರೂ ಹೇಳುವುದು ಇದೆಯೇ ಎಂದು ವರದಿಗಾರರೊಬ್ಬರು ಪ್ರಶ್ನಿಸಿದಾಗ ತನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲಾಗದ ನಕ್ಷ್, “ಸರ್ಕಾರ್ ತೋ ಗಯಿ ಹುಯಿ ಹೈ, ಮತ್ಲಬ್ ಇತ್ನಾ ಬಡಾ ಆತಂಕ್ ವಾದಿ ಹಮ್ಲಾ ಹುವಾ, ಉನ್ಹೇ ಕುಚ್ ಪತಾ ಹಿ ನಹಿ ಹೇ” ಎಂದು ಪ್ರಶ್ನಿಸಿದ್ದಾನೆ. ಪಕ್ಕದಲ್ಲಿದ್ದ ಸೇನಾ ನೆಲೆ ಒಂದು ಗಂಟೆ ಕಳೆದರೂ ಏಕೆ ನೆರವಿಗೆ ಬಂದಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾನೆ. ಈ ಪ್ರದೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸುವ ಅಗತ್ಯವನ್ನು ಬಾಲಕ ಪ್ರತಿಪಾದಿಸಿದ್ದಾನೆ.

ಬಾಲಕನ ಈ ಮಾತುಗಳು ವೈರಲ್ ಆಗಿದ್ದು, ಈತನ ಪ್ರೌಢಿಮೆ ಮತ್ತು ವಯಸ್ಸಿಗೆ ಮೀರಿದ ತಿಳಿವಳಿಕೆ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ರಾಜಕೀಯ ಮುಖಂಡರು ಮತ್ತು ಮಾಧ್ಯಮಗಳ ಮೌನ ಹಾಗೂ ಬಾಲಕನ ವಿವೇಕಯುತ ಹಾಗೂ ನೇರ ನುಡಿಯನ್ನು ಹಲವರು ಹೋಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X