ಮರಗಳನ್ನು ಕಡಿಯುವುದರ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಮಿಕ್ ಸೆಮಿನರಿ

Date:

Advertisements

ಮರಗಳನ್ನು ಕಡಿಯುವುದರ ಮತ್ತು ಬೆಳೆಗಳನ್ನು ಸುಡುವುದರ ವಿರುದ್ಧ ಇಸ್ಲಾಮಿಕ್ ಸೆಮಿನರಿಯೊಂದು ಫತ್ವಾ (ಇಸ್ಲಾಂನಲ್ಲಿ ಅರ್ಹ ಕಾನೂನು ವಿದ್ವಾಂಸರು ಅಥವಾ ಮುಫ್ತಿ ನೀಡಿದ ಇಸ್ಲಾಮಿಕ್ ಕಾನೂನಿನ ಒಂದು ಅಂಶದ ಮೇಲೆ ಔಪಚಾರಿಕ ತೀರ್ಪು) ಹೊರಡಿಸಿದೆ.

ಲಕ್ನೋದ ಇಸ್ಲಾಮಿಕ್ ಸೆಮಿನರಿಯು ಜಾಗತಿಕ ತಾಪಮಾನ ಏರಿಕೆಯನ್ನು ತಡೆಯುವ ಭಾಗವಾಗಿ ಮರಗಳನ್ನು ಕಡಿಯಬೇಡಿ ಮತ್ತು ಬೆಳೆಗಳನ್ನು ಸುಡಬೇಡಿ ಎಂದು ಫತ್ವಾ ಹೊರಡಿಸಿದೆ.

ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದ (ಐಸಿಐ) ಮೊಹಮ್ಮದ್ ತಾರಿಕ್ ಖಾನ್ ಎಂಬಾತ ತಾಪಮಾನದ ಕುರಿತು ಸ್ಪಷ್ಟೀಕರಣ ಕೇಳಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ ಇಸ್ಲಾಮಿಕ್ ಸೆಮಿನರಿ ಈ ಸಲಹೆಯಾಗಿ ಈ ಫತ್ವಾ ಜಾರಿ ಮಾಡಿದೆ.

Advertisements

ಇದನ್ನು ಓದಿದ್ದೀರಾ? ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌ ಆರೋಪ

“ಕುರಾನ್‌ನ ಪ್ರಕಾರ, ಹಸಿರನ್ನು ರಕ್ಷಿಸುವುದು, ನೀರನ್ನು ಉಳಿಸುವುದು ಮತ್ತು ವ್ಯರ್ಥ ಮಾಡುವುದನ್ನು ತಪ್ಪಿಸುವುದು ಮುಸ್ಲಿಮರ ಧಾರ್ಮಿಕ ಕರ್ತವ್ಯವಾಗಿದೆ. ಪ್ರತಿಯೊಬ್ಬ ಮುಸ್ಲಿಮರು ಹಸಿರು ಮರಗಳನ್ನು ಕಡಿಯಬಾರದು ಮತ್ತು ಬೆಳೆಗಳಿಗೆ ಬೆಂಕಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಐಸಿಐನ ಅಧ್ಯಕ್ಷ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಹೇಳಿದರು.

ವೀಡಿಯೊ ಸಂದೇಶದಲ್ಲಿ, ಮೌಲಾನಾ ಖಾಲಿದ್ ರಶೀದ್ ಜನರು ಹೆಚ್ಚು ಸಸಿಗಳನ್ನು ನೆಡಬೇಕು ಮತ್ತು ಮರಗಳನ್ನು ಕಡಿಯುವುದನ್ನು ತಪ್ಪಿಸಬೇಕು ಎಂದು ಕರೆ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

“ಸರ್ವಶಕ್ತನ ಪ್ರಕಾರ, ಮನುಷ್ಯರು ಮತ್ತು ಪ್ರಾಣಿಗಳು ಸೇರಿದಂತೆ ಎಲ್ಲಾ ಜೀವಿಗಳಿಗೆ ಅನುಕೂಲವಾಗುವ ಸಸಿಗಳನ್ನು ನೆಡುವವರಿಗೆ ಪ್ರತಿಫಲವಿದೆ. ಕೊಳಗಳು, ಕಾಲುವೆಗಳು, ನದಿಗಳು ಮತ್ತು ಸಮುದ್ರಗಳನ್ನು ಕಲುಷಿತಗೊಳಿಸದಂತೆ ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿ” ಎಂದು ತಿಳಿಸಿದ್ದಾರೆ.

“ಇಸ್ಲಾಂನಲ್ಲಿ ಮರಗಳನ್ನು ಕಡಿಯುವುದು ಪಾಪವಾಗಿದೆ. ಯುದ್ಧದ ಸಂದರ್ಭದಲ್ಲಿಯೂ ಮರ, ಗಿಡಗಳನ್ನು ನಾಶ ಮಾಡುವಂತಿಲ್ಲ, ಸುಡುವಂತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X