ದಿಢೀರ್ ಭೇಟಿ ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನಕರ್

Date:

Advertisements

ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಮುಂಚಿತವಾಗಿಯೇ ಸಮಯ ನಿಗದಿ ಮಾಡಿಕೊಳ್ಳದೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಧಾವಿಸುವ ಮೂಲಕ ರಾಷ್ಟ್ರಪತಿ ಭವನದ ಅಧಿಕಾರಿಗಳು ತಬ್ಬಿಬ್ಬಾಗಲು ಕಾರಣರಾದ ಅಂಶ ಇದೀಗ ಬೆಳಕಿಗೆ ಬಂದಿದೆ.

ಶಿಷ್ಟಾಚಾರಕ್ಕೆ ಅನುಸಾರವಾಗಿ ಕಾರ್ಯ ನಿರ್ವಹಿಸುವ ರಾಷ್ಟ್ರಪತಿ ಕಾರ್ಯಾಲಯ, ಧೀರ್ಘಕಾಲದಿಂದ ಇಂಥ ಅನಿರೀಕ್ಷಿತ ಬೆಳವಣಿಗೆಯನ್ನು ಎದುರಿಸಿರಲಿಲ್ಲ. ಮೊದಲೇ ಸಮಯ ನಿಗದಿಪಡಿಸಿಕೊಳ್ಳದೇ ಸಂವಿಧಾನಾತ್ಮಕ ಹುದ್ದೆ ಹೊಂದಿದ ಧನಕರ್ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದು, ಸಂಚಲನಕ್ಕೆ ಕಾರಣವಾಯಿತು. ಎಡಿಸಿ ತಕ್ಷಣ ಮಿಲಿಟರಿ ಕಾರ್ಯದರ್ಶಿಯವರ ಬಳಿಗೆ ತೆರಳಿ ಆವರಣಕ್ಕೆ ಧನಕರ್ ಆಗಮಿಸಿದ ಸುದ್ದಿ ಮುಟ್ಟಿಸಿದರು.

ರಾಷ್ಟ್ರಪತಿ ಜತೆಗೆ ತರಾತುರಿಯ ಭೇಟಿ ನಿಗದಿಪಡಿಸಿದ ಬಳಿಕ ಧನಕರ್ ಸಂವಿಧಾನಾತ್ಮಕ ಅಗತ್ಯತೆಯಂತೆ ರಾಜೀನಾಮೆ ಪತ್ರ ಸಲ್ಲಿಸಿದರು. ಎಕ್ಸ್ ಖಾತೆ ಮೂಲಕ ರಾತ್ರಿ 9.25ಕ್ಕೆ ಧನಕರ್ ಈ ಬೆಳವಣಿಗೆಯನ್ನು ಪ್ರಕಟಿಸಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಈ ತಡರಾತ್ರಿಯ ಪ್ರಸಹನದ ಬಗ್ಗೆ ಯಾವುದೇ ಸುಳಿವು ಕೂಡಾ ಹೊಂದಿರದೇ ಇದ್ದುದನ್ನು ನೋಡಿದರೆ ಅವರ ರಾಜೀನಾಮೆಗೆ ದಿಢೀರ್ ಬೆಳವಣಿಗೆಯೊಂದು ಕಾರಣವಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸುತ್ತದೆ. ಧನಕರ್ ರಾಜೀನಾಮೆ ಬಗ್ಗೆ ಗೃಹ ಸಚಿವಾಲಯ ಅಧಿಕೃತ ಹೇಳಿಕೆಯನ್ನು ಮಂಗಳವಾರ ಅಧಿಸೂಚನೆ ಮೂಲಕ ಪ್ರಕಟಿಸಿದ್ದು, ಗಜೆಟ್ ಅಧಿಸೂಚನೆಗೆ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಸಹಿ ಮಾಡಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ ಅವರು ರಾಷ್ಟ್ರಪತಿ ಭವನಕ್ಕೆ ಮಂಗಳವಾರ ಭೇಟಿ ನೀಡಿದ್ದರು. ರಾಜ್ಯಸಭೆಯ ಬೆಳಿಗ್ಗೆಯ ಕಲಾಪದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X