ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

Date:

Advertisements

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ.

ನಿಗೂಢ ಕಾಯಿಲೆಯ ಕಾರಣವನ್ನು ಕಂಡುಹಿಡಿಯಲು ಆರೋಗ್ಯ ಇಲಾಖೆ ಗ್ರಾಮದಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. ಮಾದರಿಗಳನ್ನು (ಸ್ಯಾಂಪಲ್) ಸಂಗ್ರಹಣೆ ಮಾಡುತ್ತಿದೆ.

ಮೊಹಮ್ಮದ್ ಯೂಸುಫ್ ಎಂದು ಗುರುತಿಸಲಾದ ವೃದ್ಧ ವ್ಯಕ್ತಿ ಸೋಮವಾರ ಸಂಜೆ ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇದಕ್ಕೂ ಮೊದಲು, ಸೋಮವಾರ ಬೆಳಿಗ್ಗೆ 10 ವರ್ಷದ ಬಾಲಕ ಮೊಹಮ್ಮದ್ ಮರೂಫ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.

Advertisements

ಅಲ್ಲದೆ, ಭಾನುವಾರ ಕೂಡ ಇದೇ ನಿಗೂಢ ಕಾಯಿಲೆಯಿಂದ ಜಹೂರ್ ಅಹ್ಮದ್ (14 ವರ್ಷ) ಮತ್ತು ನಬೀನಾ ಅಖ್ತರ್ (5 ವರ್ಷ) ಎಂಬ ಇಬ್ಬರು ಮಕ್ಕಳು ಮರಣ ಹೊಂದಿದ್ದರು.

ಡಿಸೆಂಬರ್ ಆರಂಭದಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಏಳು ಮಂದಿ ಡಿಸೆಂಬರ್ 7ರಂದು ಸಾವನ್ನಪ್ಪಿದ್ದರು. ಅಂದಿನಿಂದ ಇಂದಿನವರೆಗೆ ಸಾವನ್ನಪ್ಪಿರುವ 13 ಮಂದಿಯೂ ಜ್ವರ, ಬೆವರು, ವಾಂತಿ, ನಿರ್ಜಲೀಕರಣ ಹಾಗೂ ಪ್ರಜ್ಞೆ ಕಳೆದುಕೊಳ್ಳುವ ರೋಗಲಕ್ಷಣಗಳನ್ನು ಹೊಂದಿದ್ದರು ಎಂದು ವರದಿಯಾಗಿದೆ.

ರಾಜೌರಿ ಮುಖ್ಯ ವೈದ್ಯಾಧಿಕಾರಿ (CMO) ಡಾ. ಮನೋಹರ್ ಲಾಲ್ ಹೇಳುವಂತೆ, ಸಂಭಾವ್ಯ ಆರೋಗ್ಯ ಅಪಾಯಗಳನ್ನು ಗುರುತಿಸಲು ಮತ್ತು ಪರಿಹರಿಸಲು ಗ್ರಾಮದಲ್ಲಿ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಇಲ್ಲಿಯವರೆಗೆ, ನಿಗೂಢ ಕಾಯಿಲೆಯು ಗ್ರಾಮದ ಮೂರು ಕುಟುಂಬಗಳಿಗೆ ಸೀಮಿತವಾಗಿದೆ. ಇತರರಿಗೂ ಕಾಯಿಲೆ ಹರಡದಂತೆ ತಡೆಯಬೇಕಾಗಿದೆ. ಗ್ರಾಮದಲ್ಲಿ ಒಟ್ಟು 5,700 ಜನರಿದ್ದು, 12,000 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಿದ್ದೇವೆ. ನಾವು ಪುನರಾವರ್ತಿತ ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ ಎಂದು ಮನೋಹರ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಪರೀಕ್ಷೆಯ ಸಮಯದಲ್ಲಿ, ಯಾವುದೇ ವೈರಾಣು ಕಂಡುಬಂದಿಲ್ಲ. ನೀರು ಸಹ ಶುದ್ಧವಾಗಿದೆ ಎಂದು ದೃಢಪಡಿಸಲಾಗಿದೆ. ಮೃತರ ಮರಣೋತ್ತರ ಪರೀಕ್ಷೆ ಮತ್ತು FSL ವರದಿಗಳಿಗಾಗಿ ಕಾಯಲಾಗುತ್ತಿದೆ. ಆ ವರದಿಯಿಂದ ಏನಾದರೂ ಹೆಚ್ಚಿನ ಮಾಹಿತಿ ತಿಳಿಯಬಹುದೆಂದು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಸ್ತುತ, ಜಮ್ಮುವಿನ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X