ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ಆರಂಭ

Date:

Advertisements

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 7.14 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಭಾರೀ ಭದ್ರತೆಯ ನಡುವೆ ಚಿನಾಬ್ ಕಣಿವೆ ಜಿಲ್ಲೆಗಳಾದ ದೋಡಾ, ಕಿಸ್ತ್ವಾರ, ರಾಂಬನ್, ಅನಂತನಾಗ್, ಪುಲ್ವಾಮಾ, ಕುಲ್ಗಾಮ್ ಮತ್ತು ಶೋಪಿಯಾನ್ ಕ್ಷೇತ್ರಗಳಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಕಣಿವೆ ರಾಜ್ಯಕ್ಕೆ ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ಕೊಡಿಸುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮುಂದೆ ಇಲ್ಲಿ ಸರ್ಕಾರ ರಚಿಸಲು ಈ ಮೈತ್ರಿಕೂಟವು ಪ್ರಬಲ ಪೈಪೋಟಿ ನೀಡುತ್ತಿದೆ.

ಜಮ್ಮು ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಉದ್ದೇಶಿಸಿದೆ. 2014ರಲ್ಲಿ ನಡೆದ ವಿಧಾನಸಭಾ
ಚುನಾವಣೆಯಲ್ಲಿ ಬಿಜೆಪಿಯು ಈ ಭಾಗದ 37 ಸ್ಥಾನಗಳ ಪೈಕಿ 25 ಸ್ಥಾನಗಳಲ್ಲಿ ಗೆದ್ದಿತ್ತು. ಬಹುಮತ ಪಡೆಯಲು
ಬಿಜೆಪಿಯು ಸಣ್ಣ ಪಕ್ಷಗಳಾದ ಪೀಪಲ್ಸ್ ಕಾನ್ಫರೆನ್ಸ್, ಅಪ್ನಿ ಪಾರ್ಟಿಯನ್ನು ನೆಚ್ಚಿಕೊಳ್ಳಬೇಕಾಗಬಹುದು. ಎರಡನೆಯ ಹಾಗೂ ಮೂರನೆಯ ಹಂತದ ಮತದಾನವು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆಯಲಿದೆ. ಅಕ್ಟೋಬರ್ 8ಕ್ಕೆ ಮತ ಎಣಿಕೆಯಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X