ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

Date:

Advertisements

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈರಾಮ್ ರಮೇಶ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.ಈ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ಕ್ರಮವಾಗಿ ಬಿಹಾರ ಮತ್ತು ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದವು. ಆದರೆ ಈ ವಿಷಯದಲ್ಲಿ ಟಿಡಿಪಿ ಮಾತ್ರ ಮೌನವಹಿಸಿತ್ತು” ಎಂದು ತಿಳಿಸಿದ್ದಾರೆ.

“ರಾಜಕೀಯ ವಾತಾವರಣ ಹೇಗೆ ಬದಲಾಗಿದೆ ಊಹಿಸಿ. ಸರ್ವಪಕ್ಷ ಸಭೆಯಲ್ಲಿ ಬಿಜೆಡಿ ನಾಯಕರು ಲೋಕಸಭೆ ಹಾಗೂ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಂತೆ ಒಡಿಶಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದರು. ಇದನ್ನು ಈಡೇರಿಸುವಂತೆ ರಕ್ಷಣಾ ಸಚಿವರಿಗೆ ಬಿಜೆಡಿ ನಾಯಕರು ನೆನಪಿಸಿದರು” ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಡಿ ನಾಯಕ ಸಸ್ಮಿತ್ ಪಾತ್ರ, ತಮ್ಮ ಪಕ್ಷ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿದೆ ಎಂದು ತಿಳಿಸಿದರು.

ಎನ್‌ಡಿಎ ಪ್ರಮುಖ ಮಿತ್ರ ಪಕ್ಷವಾಗಿರುವ ಜೆಡಿಯು ಇತ್ತೀಚಿಗಷ್ಟೆ ತಮ್ಮ ರಾಜ್ಯದ ವಿಧಾನಸಭೆಯಲ್ಲಿ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಪ್ಯಾಕೇಜ್‌ ನೀಡುವಂತೆ ನಿರ್ಣಯ ಅಂಗೀಕರಿಸಿತ್ತು.

ವೈಎಸ್‌ಆರ್‌ಸಿಪಿ ನಾಯಕರು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X