ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

Date:

Advertisements

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈರಾಮ್ ರಮೇಶ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.ಈ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ಕ್ರಮವಾಗಿ ಬಿಹಾರ ಮತ್ತು ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದವು. ಆದರೆ ಈ ವಿಷಯದಲ್ಲಿ ಟಿಡಿಪಿ ಮಾತ್ರ ಮೌನವಹಿಸಿತ್ತು” ಎಂದು ತಿಳಿಸಿದ್ದಾರೆ.

“ರಾಜಕೀಯ ವಾತಾವರಣ ಹೇಗೆ ಬದಲಾಗಿದೆ ಊಹಿಸಿ. ಸರ್ವಪಕ್ಷ ಸಭೆಯಲ್ಲಿ ಬಿಜೆಡಿ ನಾಯಕರು ಲೋಕಸಭೆ ಹಾಗೂ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಂತೆ ಒಡಿಶಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದರು. ಇದನ್ನು ಈಡೇರಿಸುವಂತೆ ರಕ್ಷಣಾ ಸಚಿವರಿಗೆ ಬಿಜೆಡಿ ನಾಯಕರು ನೆನಪಿಸಿದರು” ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

Advertisements
Bose Military School

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಡಿ ನಾಯಕ ಸಸ್ಮಿತ್ ಪಾತ್ರ, ತಮ್ಮ ಪಕ್ಷ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿದೆ ಎಂದು ತಿಳಿಸಿದರು.

ಎನ್‌ಡಿಎ ಪ್ರಮುಖ ಮಿತ್ರ ಪಕ್ಷವಾಗಿರುವ ಜೆಡಿಯು ಇತ್ತೀಚಿಗಷ್ಟೆ ತಮ್ಮ ರಾಜ್ಯದ ವಿಧಾನಸಭೆಯಲ್ಲಿ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಪ್ಯಾಕೇಜ್‌ ನೀಡುವಂತೆ ನಿರ್ಣಯ ಅಂಗೀಕರಿಸಿತ್ತು.

ವೈಎಸ್‌ಆರ್‌ಸಿಪಿ ನಾಯಕರು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ಲಾಸ್ಟಿಕ್ ಚೀಲ ಮುಕ್ತ ದಿನ | ಪರಿಸರ ಸ್ನೇಹಿ ಭವಿಷ್ಯಕ್ಕಾಗಿ ಜಾಗತಿಕ ಹೋರಾಟ

ಪ್ಲಾಸ್ಟಿಕ್ ಚೀಲ ಮುಕ್ತ ದಿನವು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಅರಿತು, ಬಟ್ಟೆಯ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ...

7 ವರ್ಷಗಳ ಪ್ರೀತಿ: ಮದುವೆಗೆ ನಿರಾಕರಿಸಿದ ಪ್ರಿಯಕರ; ನೊಂದು ಆ್ಯಸಿಡ್ ಕುಡಿದ ಯುವತಿ

ಏಳು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆಂದು ಯುವತಿಯೊಬ್ಬರು...

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ;...

Download Eedina App Android / iOS

X