ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Date:

Advertisements

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ನ  500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್, ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ ಮತ್ತು ಭಾರತದ ಕೆಲವು ರಾಜ್ಯಗಳಲ್ಲಿ ಕಂಪನಿಗಳು ಮತ್ತು ಸಂಬಂಧಪಟ್ಟ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್‌ಗಳು, ಬಂಗಲೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿವೆ.

ಕೇಂದ್ರ ತನಿಖಾ ಸಂಸ್ಥೆ ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಥವಾ ಪಿಎಂಎಲ್ಎ, 2002ರ ಅಡಿಯಲ್ಲಿ ಜಪ್ತಿ ಮಾಡಿದೆ.

Advertisements

ಗೋಯಲ್‌ಗಳ ಹೊರತಾಗಿ, ಕೆಲವು ಆಸ್ತಿಗಳನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್‌ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಬ್ಯಾಂಕ್ ಸಲ್ಲಿಸಿರುವ ಎಫ್ಐಆರ್‌ನಲ್ಲಿ 848 ಕೋಟಿ ರೂ. ವರೆಗಿನ ಸಾಲದ ಮಿತಿಗಳನ್ನು ಮತ್ತು ಸಾಲವನ್ನು ಮಂಜೂರು ಮಾಡಿದೆ ಎಂದು ಆರೋಪಿಸಿದೆ. ಅದರಲ್ಲಿ 538 ಕೋಟಿ ರೂ. ಬಾಕಿ ಇದೆ.

ಗೋಯಲ್ ಅವರನ್ನು ಪಿಎಂಎಲ್ಎ ಅಡಿಯಲ್ಲಿ ಸೆಪ್ಟೆಂಬರ್ 1 ರಂದು ಇಡಿ ಬಂಧಿಸಿತು. ಸದ್ಯ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.

ಜೆಟ್ ಏರ್‌ವೇಸ್ ಸಂಸ್ಥಾಪಕರು ಇತರ ದೇಶಗಳಲ್ಲಿ ಟ್ರಸ್ಟ್‌ಗಳನ್ನು ರಚಿಸುವ ಮೂಲಕ ಹಣವನ್ನು ವರ್ಗಾಯಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಆ ಟ್ರಸ್ಟ್​ಗಳ ಮೂಲಕ ಚಿರಾಸ್ತಿಗಳನ್ನು ಖರೀದಿಸಲಾಗಿದೆ. ಆಸ್ತಿ ಮಾತ್ರವಲ್ಲ, ಈ ಸಾಲದ ಹಣವನ್ನೇ ಬಳಸಿ ಬಟ್ಟೆಬರೆ, ಪೀಠೋಪಕರಣ, ಒಡವೆ ಇತ್ಯಾದಿಗಳನ್ನು ಗೋಯಲ್ ಕುಟುಂಬ ಸದಸ್ಯರು ಖರೀದಿ ಮಾಡಿರುವುದು ಆಡಿಟಿಂಗ್ ವೇಳೆ ಬೆಳಕಿಗೆ ಬಂದಿತ್ತು.

ಈ ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಎರಡು ತಿಂಗಳ ಹಿಂದೆ ನಡೆದ ವಿಚಾರಣೆ ವೇಳೆ ನರೇಶ್ ಗೋಯಲ್ ಅವರು ತಮ್ಮ ಹಣ ಬಳಕೆಯ ರೀತಿಯನ್ನು ಸಮರ್ಥಿಸಿಕೊಂಡಿದ್ದರು. ವೈಮಾನಿಕ ವಲಯವು ಬ್ಯಾಂಕ್ ಸಾಲದ ಮೇಲೆ ನಿಂತಿರುತ್ತವೆ. ಸಾಲದ ಹಣದ ಬಳಕೆಯನ್ನು ಮನಿ ಲಾಂಡರಿಂಗ್ ಎನ್ನಲಾಗದು ಎಂಬುದು ಅವರ ವಾದ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X