ಜಾರ್ಖಂಡ್‌ | ಹಳಿ ತಪ್ಪಿದ ಮುಂಬೈ-ಹೌರಾ ರೈಲಿನ 18 ಭೋಗಿಗಳು; ಇಬ್ಬರು ಮೃತ್ಯು

Date:

Advertisements

ಮಂಗಳವಾರ ಮುಂಜಾನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಮುಂಬೈ-ಹೌರಾ ರೈಲಿನ 18 ಭೋಗಿಗಳು ಹಳಿತಪ್ಪಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ದಿ ಮಿಂಟ್ ವರದಿ ಮಾಡಿದೆ.

ಮುಂಜಾನೆ ಸುಮಾರು 3.45 ಗಂಟೆಗೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸ್‌ಇಆರ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಸಮೀಪಿದಲ್ಲೇ ಸರಕು ಸಾಗಣೆ ರೈಲು ಕೂಡಾ ಹಳಿತಪ್ಪಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿ ಓಂ ಪ್ರಕಾಶ್ ಚರಣ್ ಹೇಳಿದ್ದಾರೆ. ಆದರೆ ಈ ಎರಡೂ ಅಪಘಾತಗಳು ಏಕಕಾಲದಲ್ಲಿಯೇ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

Advertisements

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಪಾಲ್ಘರ್‌ನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಹಳಿತಪ್ಪಿದ 18 ಬೋಗಿಗಳಲ್ಲಿ 16 ಪ್ಯಾಸೆಂಜರ್ ಬೋಗಿಗಳು, ಒಂದು ಪವರ್ ಭೋಗಿ ಮತ್ತು ಒಂದು ಪ್ಯಾಂಟ್ರಿ ಭೋಗಿಯಾಗಿದೆ. ಹಳಿ ತಪ್ಪಲು ನಿಖರವಾದ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಓಂ ಪ್ರಕಾಶ್ ಚರಣ್ ತಿಳಿಸಿದ್ದಾರೆ.

ಗಾಯಾಳುಗಳಿಗೆ ರೈಲ್ವೇಯ ವೈದ್ಯಕೀಯ ತಂಡ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಚಕ್ರಧರಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಗಾಯಾಳುಗಳ ನಿಖರ ಸಂಖ್ಯೆ ತಿಳಿದುಬಂದಿಲ್ಲ. ಕೆಲವು ಮಾಧ್ಯಮಗಳು ಕನಿಷ್ಠ 60 ಮಂದಿ ಗಾಯಗೊಂಡಿರುವುದಾಗಿ ವರದಿ ಮಾಡಿದೆ.

ಇನ್ನು ಇತ್ತೀಚೆಗೆ ಹಲವಾರು ರೈಲುಗಳು ಹಳಿ ತಪ್ಪಿರುವ ಘಟನೆಗಳು ನಡೆದಿದೆ. ಇತ್ತೀಚೆಗೆ ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಗೂಡ್ಸ್‌ ರೈಲೊಂದು ಹಳಿತಪ್ಪಿತ್ತು.

ಭಾರತೀಯ ರೈಲ್ವೇ ಕೂಡ ಪ್ರಯಾಣಿಕರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

ಟಾಟಾನಗರ: 06572290324
ಚಕ್ರಧರಪುರ: 06587 238072
ರೂರ್ಕೆಲಾ: 06612501072, 06612500244
ಹೌರಾ: 9433357920, 03326382217
ರಾಂಚಿ: 0651-27-87115
ಮುಂಬೈ: 022-22694040

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X