ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

Date:

Advertisements

ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರ ಸಮ್ಮುಖದಲ್ಲಿ ಪಟೇಲ್ ಕಾಂಗ್ರೆಸ್‌ಗೆ ಸೇರಿದ್ದಾರೆ.

ಜೈ ಪ್ರಕಾಶ್ ಭಾಯ್ ಪಟೇಲ್ ಜಾರ್ಖಂಡ್‌ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಾಂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದು ಈ ಹಿಂದೆ ಜಾರ್ಖಂಡ್ ಮುಕ್ತಿ ಮೋರ್ಚಾದ ಶಾಸಕರಾಗಿದ್ದರು. “ಎನ್‌ಡಿಎಯಲ್ಲಿ ನನ್ನ ತಂದೆಯ ಸಿದ್ಧಾಂತ ಕಾಣುತ್ತಿಲ್ಲ” ಎಂದು ಬಿಜೆಪಿ ತೊರೆದು ಕಾಂಗ್ರೆಸ್‌ ತೆಕ್ಕೆ ಸೇರಿದ್ದಾರೆ.

“ಮಾಜಿ ಸಂಸದ, ನನ್ನ ತಂದೆ ತೆಕ್ ಲಾಲ್ ಮಹ್ತೊ ಕನಸುಗಳನ್ನು ನನಸು ಮಾಡಲು ನಾನು ಈ ನಿರ್ಧಾರವನ್ನು ಮಾಡಿದೆ. ನನ್ನ ತಂದೆ ಮೆಚ್ಚುವ ಸಿದ್ಧಾಂತ ಎನ್‌ಡಿಎಯಲ್ಲಿ ಕಾಣುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ‘ಇಂಡಿಯಾ’ ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ” ಎಂದು ತಿಳಿಸಿದರು.

Advertisements

ಇನ್ನು ಇದೇ ಸಂದರ್ಭದಲ್ಲಿ ಜಾರ್ಖಂಡ್‌ನ ಎಲ್ಲ 14 ಲೋಕಸಭಾ ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟ ಜಯ ಕಾಣಲಿದೆ ಎಂದು ಜೈ ಪ್ರಕಾಶ್ ಭಾಯ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಪಟೇಲ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜಾರ್ಖಂಡ್ ಲೋಕಸಭೆ ಚುನಾವಣೆ

ಜಾರ್ಖಂಡ್‌ನಲ್ಲಿ ಲೋಕಸಭೆ ಚುನಾವಣೆಯು ನಾಲ್ಕು ಹಂತಗಳಲ್ಲಿ ಮೇ 13ರಿಂದ ಜೂನ್ 1ರವರೆಗೆ ನಡೆಯಲಿದೆ. ಲೋಕಸಭೆ ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X