ಜಾರ್ಖಂಡ್ ಭೂ ಹಗರಣ| ಮಾಜಿ ಸಿಎಂ ಹೇಮಂತ್ ಸೊರೇನ್‌ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

Date:

Advertisements

ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರ ನ್ಯಾಯಾಂಗ ಬಂಧನವನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು 14 ದಿನಗಳ ಕಾಲ ವಿಸ್ತರಣೆ ಮಾಡಿದೆ.

ಭೂ ಹಗರಣದ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಸೋರೆನ್ ಇದ್ದಾರೆ. ಸೋರೆನ್ ಮತ್ತು ಇತರ 11 ಆರೋಪಿಗಳನ್ನು ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ.

ಈ ವಿಚಾರಣೆಯ ಬಳಿಕ ನ್ಯಾಯಾಲಯವು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಇನ್ನೂ 14 ದಿನಗಳವರೆಗೆ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆಯು ಜುಲೈ 11ರಂದು ನಡೆಯಲಿದೆ.

Advertisements

ಇದನ್ನು ಓದಿದ್ದೀರಾ?  ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ

ಹೇಮಂತ್ ಸೊರೇನ್ ಹೊರತುಪಡಿಸಿ, ಅಮಾನತುಗೊಂಡ ಬರ್ಗೈ ವಲಯದ ಕಂದಾಯ ಉಪನಿರೀಕ್ಷಕ ಭಾನು ಪ್ರತಾಪ್, ಜೆಎಂಎಂ ನಾಯಕ ಅಂತು ಟಿರ್ಕಿ, ಎಂಡಿ ಸದ್ದಾಂ, ಎಂಡಿ ಅಫ್ಸರ್ ಅಲಿ, ವಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಇರ್ಷಾದ್ ಅಖ್ತರ್ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು.

ಶೇಖರ್ ಕುಶ್ವಾಹಾ, ಎಂಡಿ ಇರ್ಷಾದ್, ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್‌ನ ಇಬ್ಬರು ಉದ್ಯೋಗಿಗಳು ತಪಸ್ ಘೋಷ್ ಮತ್ತು ಸಂಜಿತ್ ಕುಮಾರ್ ಕೂಡಾ ವಿಚಾರಣೆಗೆ ಹಾಜರಾದರು. ಅವರ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಹಲವಾರು ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಇಡಿಯು ಜನವರಿ 31ರಂದು ಜನವರಿ 31ರಂದು ಹೇಮಂತ್ ಸೊರೆನ್ ಅವರನ್ನು ಬಂಧಿಸಿದೆ. ಏಪ್ರಿಲ್ 15ರಂದು ಜೆಎಂಎಂ ನಾಯಕ ಅಂತು ಟಿರ್ಕಿ, ಭೂ ಉದ್ಯಮಿ ಬಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಮೊಹಮ್ಮದ್ ಇರ್ಷಾದ್ ಅವರನ್ನು ಬಂಧಿಸಿದೆ.

ಇನ್ನು ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ ಆರೋಪದಲ್ಲಿ ಮಾಸ್ಟರ್ ಮೈಂಡ್ ಎಂಡಿ ಅಫ್ಸರ್ ಮತ್ತು ಎಂಡಿ ಸದ್ದಾಂ ಅವರನ್ನೂ ಇಡಿ ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X