ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

Date:

Advertisements

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲರಾದ ನ್ಯಾ. ಫಾತಿಮಾ ಬೀವಿ ಅವರು ಗುರುವಾರ ಕೇರಳದ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.

1927 ಏಪ್ರಿಲ್ 30 ರಂದು ಕೇರಳದ ತಿರುವಂಕೂರಿನ ಗ್ರಾಮವೊಂದರಲ್ಲಿ ಜನಿಸಿದ ಫಾತಿಮಾ ಬೀವಿ ಅವರು 1950ರಲ್ಲಿ ಚಿನ್ನದ ಪದಕದೊಂದಿಗೆ ಎಲ್‌ಎಲ್‌ಬಿ ಪದವಿ ಪಡೆದು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. ಎಂಟು ವರ್ಷಗಳ ನಂತರ ಅವರು ನ್ಯಾಯಾಂಗ ಸೇವೆಗೆ ಮ್ಯಾಜಿಸ್ಟ್ರೇಟ್ ಆಗಿ ಸೇರಿಕೊಂಡರು ಮತ್ತು 1974 ರಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದರು.

ಬೀವಿ ಅವರು 1983 ರಲ್ಲಿ ಕೇರಳ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 1989 ರಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

Advertisements

ಈ ಸುದ್ದಿ ಓದಿದ್ದೀರಾ? ಬಿರಿಯಾನಿಗಾಗಿ 60 ಬಾರಿ ಇರಿದು ಮೃತದೇಹದ ಮೇಲೆ ನೃತ್ಯವಾಡಿದ 18ರ ಯುವಕ

1993 ರಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಂತರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ತಮಿಳುನಾಡಿನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದರು.

ನ್ಯಾಯಮೂರ್ತಿ ಫಾತಿಮ ಬೀವಿ ಅವರ ನಿಧನಕ್ಕೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಸಂತಾಪ ಸೂಚಿಸಿದ್ದಾರೆ.

“ನ್ಯಾಯಮೂರ್ತಿ ಬೀವಿ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಮತ್ತು ತಮಿಳುನಾಡು ರಾಜ್ಯಪಾಲರಾಗಿ ತಮ್ಮದೆ ಆದ ವಿಶಿಷ್ಟ ರೀತಿಯಲ್ಲಿ ಛಾಪು ಮೂಡಿಸಿದ್ದಾರೆ. ಅವರು ತನ್ನ ಹೆಸರಿಗೆ ಅನೇಕ ದಾಖಲೆಗಳನ್ನು ಹೊಂದಿದ್ದ ಧೈರ್ಯಶಾಲಿ ಮಹಿಳೆ. ಇಚ್ಛಾಶಕ್ತಿ ಮತ್ತು ಸದುದ್ದೇಶ ಹೊಂದಿರುವ ಗುರಿಯು ಎಂತಹ ಸಂದರ್ಭದಲ್ಲಿಯೂ ಗೆಲುವು ತಂದುಕೊಡುತ್ತದೆ ಎನ್ನುವುದನ್ನು ತಮ್ಮ ಸ್ವಂತ ಜೀವನದ ಮೂಲಕ ತೋರಿಸಿದ ವ್ಯಕ್ತಿತ್ವ ಅವರದು” ಎಂದು ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X