ದೆಹಲಿ | ಬೆಂಬಲಿಗನ ನೆಪದಲ್ಲಿ ಬಂದು ಕನ್ಹಯ್ಯ ಕುಮಾರ್ ಮೇಲೆ ಹಲ್ಲೆಗೈದ ಬಿಜೆಪಿ ಕಾರ್ಯಕರ್ತ

Date:

Advertisements

ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ ಬೆಂಬಲಿಗನ ನೆಪದಲ್ಲಿ ಬಂದು ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಹೂವಿನ ಹಾರವೊಂದನ್ನು ತಂದು, ಕನ್ಹಯ್ಯ ಕುಮಾರ್ ಕೊರಳಿಗೆ ಹಾಕಿದ ಬಳಿಕ ಕೆನ್ನೆಗೆ ಬಾರಿಸಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಹಾಗೂ ಇತರ ಕಾರ್ಯಕರ್ತರು ಆತನನ್ನು ಹಿಡಿದಿದ್ದಾರೆ. ಹಲ್ಲೆಗೈದಾತನ ವಿವರ ಇನ್ನೂ ಲಭ್ಯವಾಗಿಲ್ಲ. ಈಶಾನ್ಯ ದೆಹಲಿಯ ಓಸ್ಮಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ತಾರ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಯ ವೇಳೆಯಲ್ಲಿಯೇ ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗೂ ಬಿಜೆಪಿ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisements

ತಮ್ಮ ದೂರಿನಲ್ಲಿ, ಶುಕ್ರವಾರ ಸಂಜೆ 4 ಗಂಟೆಗೆ ಕರ್ತಾರ್ ನಗರದ ಸತ್ಯನಾರಾಯಣ ಭವನದ ಕೌನ್ಸಿಲರ್ ಕಚೇರಿ ಚೌತಾ ಪುಷ್ಮದಲ್ಲಿ ನಡೆದ ಸಭೆಯ ನಂತರ ಸುಮಾರು 7-8 ಜನರು ಬಂದು ಕನ್ನಯ್ಯಾ ಕುಮಾರ್‌ಗೆ ಹಾರ ಹಾಕಿ ಕಪಾಳಮೋಕ್ಷ ಮಾಡಿದರು. ಈ ವೇಳೆ ನಾನೂ ಕೂಡ ಅಲ್ಲಿ ಉಪಸ್ಥಿತಳಿದ್ದೆ. ನನ್ನ ಜುಟ್ಟು ಹಿಡಿದು ಎಳೆದಾಡಿದ್ದಾರೆ. ಇದಾದ ಬಳಿಕ ನನಗೆ ಹಾಗೂ ನನ್ನ ಪತಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಅಲ್ಲದೇ 30 ರಿಂದ 40 ಜನರ ಮೇಲೆ ಕಪ್ಪು ಮಸಿ ಎರಚಲಾಗಿದೆ. ಘಟನೆಯ ವೇಳೆ ಮೂರ್ನಾಲ್ಕು ಮಹಿಳೆಯರು ಕೂಡ ಗಾಯಗೊಂಡಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಕನ್ಹಯ್ಯ ಕುಮಾರ್ ಅವರಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೂರ್ವ ಯೋಜಿತ ಕೃತ್ಯ ಶಂಕೆ

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾದ ಕನ್ಹಯ್ಯ ಕುಮಾರ್, ಬಿಜೆಪಿ ಅಭ್ಯರ್ಥಿಯಾದ ಮನೋಜ್ ತಿವಾರಿ ವಿರುದ್ಧ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದರಿಂದ ಸಹಿಸದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಬೆಂಬಲಗನೋರ್ವ, ಪೂರ್ವ ಯೋಜಿತವಾಗಿ ಈ ಕೃತ್ಯ ಎಸಗಿರುವ ಅನುಮಾನ ದಟ್ಟವಾಗಿದೆ.

ವೈರಲ್ ಆಗಿರುವ ವಿಡಿಯೋವೊಂದರಲ್ಲಿ ವಿಡಿಯೋ ಮಾಡುತ್ತಿದ್ದ ಬಲಪಂಥೀಯ ಸುದ್ದಿ ಹರಡುವ ಸುದರ್ಶನ್ ನ್ಯೂಸ್‌ನ ವ್ಯಕ್ತಿ, “ಈಗ ಕನ್ಹಯ್ಯ ಕುಮಾರ್‌ಗೆ ಹೊಡೆತ ಬೀಳಲಿದೆ ಎಂದು ಹಿಂದಿಯಲ್ಲಿ ಹೇಳುತ್ತಿರುವುದು ಕೇಳಿಸಿದೆ.

ಹಲ್ಲೆಗೈದಿದ್ದ ಬಿಜೆಪಿ ಕಾರ್ಯಕರ್ತನನ್ನು ಕೂಡಲೇ ಹಿಡಿದ ಸ್ಥಳದಲ್ಲಿದ್ದವರು, ಆತನ ಮೇಲೂ ಹಲ್ಲೆಗೈದಿರುವುದಾಗಿ ತಿಳಿದುಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X