11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

Date:

Advertisements

ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಶೇಕಡವಾರನ್ನು ಚುನಾವಣೆ ನಡೆದ 11 ದಿನದ ನಂತರ ಏಕೆ ಅಪ್‌ಲೋಡ್‌ ಮಾಡಲಾಗಿದೆ. ಸಾರ್ವಜನಿಕರ ದೃಷ್ಟಿಯಲ್ಲಿ ಆಯೋಗದ ವಿಶ್ವಾರ್ಹತೆ ಹಾಗೂ ಸಕಾಲಿಕ ಮಾಹಿತಿ ಮುಖ್ಯವಾಗಿದೆ ಎಂದು ತಿಳಿಸಿದರು.

“ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ಪ್ರಕಟಿಸಿದ್ದು, ಪ್ರತಿ ನಾಗರಿಕನು ಚುನಾವಣಾ ಆಯೋಗದ ಮೇಲೆ ನಂಬಿಕೆಯಿಡಬೇಕು ಎಂದು ಕೋರ್ಟ್ ಹೇಳಿದೆ. ಆದರೆ ಆಯೋಗವು ನಂಬಿಕಾರ್ಹವಾಗಿದೆಯೆ? ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಚುನಾವಣಾ ಆಯೋಗವು ಮತದಾನದ ಶೇಕಡವಾರು ಅಂಕಿಅಂಶಗಳನ್ನು ಪ್ರಕಟಿಸಿದೆ. ಇದು ಕೇವಲ ಶೇಕಡವಾರನ್ನು ಪ್ರಕಟಿಸಲಾಗಿದೆ. ಅಂಕಿಅಂಶ ಪ್ರಕಟಿಸಲಾಗಿಲ್ಲ. ಚುನಾವಣಾ ಆಯೋಗವು ಏಕೆ 11 ದಿನದ ನಂತರ ಪ್ರಕಟಿಸಲಾಗಿದೆ ಎಂಬುದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

“ನಾನು ಹಿಂದಿನ ಚುನಾವಣಾ ಆಯೋಗದ ಆಯುಕ್ತರ ಜೊತೆ ಮಾತನಾಡಿದ್ದು, ಅವರು ಹೇಳಿಕೆಯ ಪ್ರಕಾರ ಮತದಾನ ಮುಗಿನ ನಂತರ ಅಂದಿನ ರಾತ್ರಿ ಅಥವಾ ಮರುದಿನ ಪ್ರಕಟಿಸಬೇಕು ಎಂದು ಹೇಳಿದ್ದರು. ಮತ್ತೆ 11 ದಿನಗಳ ತಡವೇಕೆ. ಅನುಮಾನಗಳು ಹುಟ್ಟಿಕೊಂಡರೆ ಜನರ ನಂಬಿಕೆಯೂ ಕಡಿಮೆಯಾಗುತ್ತದೆ” ಎಂದು ಕಪಿಲ್ ಸಿಬಲ್ ಆಯೋಗದ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಈ ನಡುವೆ ಸುಪ್ರೀಂ ಕೋರ್ಟ್ ಕಳೆದ ವಾರ ಇವಿಎಂ ಮೂಲಕ ಮತದಾನ ಮಾಡಿದ ನಂತರ ವಿವಿಪ್ಯಾಡ್‌ನಲ್ಲಿ ಪರಿಶೀಲನಾ ಚೀಟಿಗಾಗಿ ಪ್ರಶ್ನಿಸಿದ್ದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಅಲ್ಲದೆ ಮತಚೀಟಿಯ ಮೂಲಕ ನಡೆಯುವ ಮತದಾನಕ್ಕೂ ನಿರಾಕರಿಸಿತ್ತು.

ಚುನಾವಣಾ ಆಯೋಗವು ಏ.30 ರಂದು ಮೊದಲ ಹಂತದಲ್ಲಿ ಶೇ.66.14 ಹಾಗೂ ಎರಡನೇ ಹಂತದಲ್ಲಿ ಶೇ.66.71 ರಷ್ಟು ಮತದಾನವಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X