ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆ

Date:

Advertisements

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ.

”ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಕೃಷ್ಣ ಶಿಲೆಯಿಂದ ಕೆತ್ತಲಾದ ಮೂರ್ತಿಯನ್ನು ಭಗವಾನ್ ಶ್ರೀ ರಾಮಲಲ್ಲಾ ವಿಗ್ರಹವಾಗಿ ಆಯ್ಕೆ ಮಾಡಲಾಗಿದೆ” ಎಂದು ದೇಗುಲ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ”ಅಯೋಧ್ಯೆಯ ರಾಮಮಂದಿರದಲ್ಲಿ ಮೈಸೂರು ಮೂಲದ ಅರುಣ್ ಅವರು ನಿರ್ಮಿಸಿರುವ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

‘ಪ್ರಾಣ ಪ್ರತಿಷ್ಠಾ’ ಮಾಡಲಿರುವ ವಿಗ್ರಹವು ಸುಮಾರು 150-200 ಕೆ.ಜಿ.ಯಿದ್ದು ಜನವರಿ 18 ರಂದು, ವಿಗ್ರಹವನ್ನು ದೇವಾಲಯದ ‘ಗರ್ಭ ಗೃಹ’ದಲ್ಲಿ ಅದರ ಸ್ಥಾನದಲ್ಲಿ ಇರಿಸಲಾಗುತ್ತದೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆಗೆ ಅರುಣ್ ಯೋಗಿರಾಜ್ ಸೇರಿದಂತೆ ಮೂವರು ಶಿಲ್ಪಿಗಳ ವಿಗ್ರಹಗಳನ್ನು ಆಯ್ಕೆ ಮಾಡಿತ್ತು.

ಅರುಣ್ ಅವರು ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಸುಭಾಶ್ ಚಂದ್ರ ಬೋಸ್ ವಿಗ್ರಹ ಸೇರಿದಂತೆ ಹಲವು ವಿಗ್ರಹಗಳನ್ನು ಕೆತ್ತಿದ್ದಾರೆ. ಮಂದಿರದ ಉದ್ಘಾಟನೆಯು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿಗ್ರಹ ಪ್ರತಿಷ್ಠಾಪನೆ ಆಗುವವರೆಗೆ ಶಿಲ್ಪಿಯ ಹೆಸರು,, ಪ್ರತಿಷ್ಠಾಪನೆ ಆಗಿ ಪ್ರಾಣ ತುಂಬಿದ ಮೇಲೆ ರಾಮಾನಂದ ಪಂಥದವರಿಗೆ ಸೇರಿಸಿರುವುದು,,ನಂತರ ವಿಗ್ರಹದ ಪೂಜಾ ವಿಧಿಗಳು ಉಡುಪಿ ಸ್ವಾಮಿಗೋಳು ಹೇಳಿದಂತೆ ನಡೆಯುವುದು,,, ಇಷ್ಟೇ ಕಥೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X