ನನ್ನನ್ನು ಅವಮಾನಿಸಿದ್ದೀರಿ, ನಾನು ಹೋರಾಟ ಮುಂದುವರೆಸುತ್ತೇನೆ: ಅನುರಾಗ್ ಠಾಕೂರ್ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Date:

Advertisements

ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುವ ಸಂದರ್ಭದಲ್ಲಿ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರು ರಾಹುಲ್‌ ಗಾಂಧಿ ಅವರನ್ನು ನಿಂದನೆ ಮಾಡಿದ್ದು ಸದನದಲ್ಲಿ ವಾಗ್ವಾದಕ್ಕೆ ಕಾರಣವಾಯಿತು.

ಅನುರಾಗ್‌ ಠಾಕೂರ್‌ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮಾತನಾಡಿದ ರಾಹುಲ್ ಗಾಂಧಿ, “ನಿಮಗೆ ಬೇಕಾದಷ್ಟು ನನ್ನನ್ನು ಅವಮಾನಿಸಿದ್ದೀರಿ, ಪ್ರತಿದಿನ ಮಾಡುತ್ತಿದ್ದೀರಿ. ಯಾರು ಆದಿವಾಸಿ, ದಲಿತ ಹಾಗೂ ಹಿಂದುಳಿದವರ ಬಗ್ಗೆ ಮಾತನಾಡುತ್ತಾರೋ ಅವರನ್ನು ಅವಮಾನಿಸಲಾಗುತ್ತಿದೆ. ನಾನು ಅವಮಾನಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್‌ ಠಾಕೂರ್‌ ನನ್ನನ್ನು ನಿಂದಿಸಿ, ಅವಮಾನಿಸಿದ್ದಾರೆ. ಅವರಿಂದ ಯಾವುದೇ ಕ್ಷಮೆ ನನಗೆ ಬೇಕಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇಶದಲ್ಲಿ ಎಷ್ಟು ಹಿಂದುಳಿದವರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರಿದ್ದಾರೊ ಎಂಬುದರ ಬಗ್ಗೆ ಯಾರಿಗೂ ತಿಳಿದಿಲ್ಲ. ಜನಸಂಖ್ಯೆಯ ಬಗ್ಗೆ ದೊಡ್ಡ ದೊಡ್ಡ ಯೋಜನೆ ರೂಪಿಸುವವರಿಗೆ  ಶೋಷಿತರ ಸಂಖ್ಯೆಯ ಬಗ್ಗೆ ತಿಳಿದಿಲ್ಲ. ಬಿಜೆಪಿ ಸರ್ಕಾರಕ್ಕೆ ಜಾತಿ ಗಣತಿಯ ಅಂಕಿಅಂಶಗಳ ಬಗ್ಗೆ ತಿಳಿದಿಲ್ಲ. ಜನಸಂಖ್ಯೆಯಲ್ಲಿ ವಿವಿಧ ಜಾತಿ ಗುಂಪುಗಳ ಬಗ್ಗೆ ತಿಳಿದುಕೊಳ್ಳಲು ನಾವು ಸಂಸತ್ತಿನಲ್ಲಿ ಜಾತಿ ಗಣತಿಯ ಮಸೂದೆಯನ್ನು ಮಂಡಿಸುತ್ತೇವೆ. ಒಮ್ಮೆ ಜಾತಿ ಗಣತಿ ಪೂರ್ಣಗೊಂಡ ನಂತರ ದೇಶ ಬದಲಾಗುತ್ತದೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಧ್ವನಿಗೂಡಿಸಿ, “ನೀವು ಯಾರೊಬ್ಬರ ಜಾತಿಯನ್ನು ಹೇಗೆ ಕೇಳುತ್ತೀರಿ? ನೀವು ಯಾರ ಜಾತಿಯನ್ನು ಕೇಳಲು ಸಾಧ್ಯವಿಲ್ಲ” ಎಂದು ಪ್ರಶ್ನಿಸಿದರು.

ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ -1 (ರಾಜೀವ್‌ ಗಾಂಧಿ) ಅವರು ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿ ಬಗ್ಗೆ ಪರೋಕ್ಷವಾಗಿ ಹೇಳಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X