ಪುಸ್ತಕ, ಶುಗರ್ ಸೆನ್ಸರ್, ಔಷಧಿ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್‌ಗೆ ಸಿಗುವ ಸೌಲಭ್ಯಗಳಿವು

Date:

Advertisements

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಅಲ್ಲಿ ಅವರಿಗೆ ಪುಸ್ತಕ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ದೆಹಲಿ ಕೋರ್ಟ್ ಅವಕಾಶ ನೀಡಿದೆ.

ವಿಶೇಷ ಡಯೆಟ್‌ಗೆ ಕೋರ್ಟ್ ಅನುಮತಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರು ಮನೆಯಲ್ಲಿ ತಯಾರಿಸಿದ ಊಟ ಸೇವಿಸಲು, ಮಿನರಲ್ ಬಾಟಲಿ ನೀರು ಪಡೆಯಬಹುದಾಗಿದೆ. ಜೊತೆಗೆ ದೇಹದಲ್ಲಿ ಸಕ್ಕರೆ ಪ್ರಮಾಣ ಏರುಪೇರಾದಾಗ ಸಿಹಿ (toffees) ಪಡೆಯಲು ಅವಕಾಶ ನೀಡಲಾಗಿದೆ. ಜೊತೆಗೆ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಭೇಟಿಯಾಗಲು ಅವಕಾಶವಿದೆ.

ಇನ್ನು ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯವನ್ನು ಪರಿಶೀಲಿಸುತ್ತಿರಲು ತಿಳಿಸಲಾಗಿದೆ. ಕೇಜ್ರಿವಾಲ್ ಮಧುಮೇಹ ಹೊಂದಿರುವ ಕಾರಣ ಶುಗರ್ ಸೆನ್ಸರ್ ಸೌಲಭ್ಯ ನಿಡಲಾಗಿದೆ. ಕೇಜ್ರಿವಾಲ್ ಅವರು ತಮ್ಮ ಕನ್ನಡಕ ಮತ್ತು ತಮ್ಮ ಧಾರ್ಮಿಕ ಲಾಕೆಟ್ ಧರಿಸಲು ಅವಕಾಶವಿದೆ. ಇನ್ನು ಕೆಲವು ಪುಸ್ತಕಗಳನ್ನು ನೀಡುವಂತೆ ಕೇಜ್ರಿವಾಲ್ ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ?   ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ

ಅದರಂತೆ ಕೋರ್ಟ್ ಭಗವದ್ಗೀತೆ, ರಾಮಾಯಣ, ಪತ್ರಕರ್ತೆ ನೀರ್ಜಾ ಚೌಧರಿ ಬರೆದ ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್ (How Prime Ministers Decide) ಪುಸ್ತಕ ನೀಡಲು ಜೈಲಿನ ಅಧಿಕಾರಿಗಳಿಗೆ ತಿಳಿಸಿದೆ. ಜೊತೆಗೆ ಇತರೆ ಪುಸ್ತಕ, ನೋಟ್‌ಪ್ಯಾಡ್‌, ಪೆನ್‌ ನೀಡಲು ತಿಳಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವಿನ್ಯೂ ಕೋರ್ಟ್ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇ.ಡಿ ಕಸ್ಟಡಿ ಅವಧಿ ಸೋಮವಾರ ಅಂತ್ಯವಾದ ಕಾರಣ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X