ಕೇರಳ| ಪ್ಯಾಲೆಸ್ತೀನ್ ಪರ ಪೋಸ್ಟರ್‌ ಹರಿದ ಆರೋಪ; ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರ ಮೇಲೆ ಪ್ರಕರಣ

Date:

Advertisements

ಜಮಾತ್-ಎ-ಇಸ್ಲಾಮ್‌ನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಹಾಕಿದ್ದ ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆರೋಪದ ಮೇಲೆ ಇಬ್ಬರು ಆಸ್ಟ್ರೇಲಿಯಾದ ಮಹಿಳಾ ಪ್ರವಾಸಿಗರ ವಿರುದ್ಧ ಕೊಚ್ಚಿ ನಗರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಫೋರ್ಟ್ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆಯಾಗಲಿ ಅಥವಾ ಗಲಭೆ ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಪ್ರಕರಣ ದಾಖಲಿಸಲಾಗಿದೆ. ಜಾಮೀನು ಪಡೆದ ಬಳಿಕ ಈ ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರು ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಪ್ರವಾಸಿಗರು ಸೋಮವಾರ ರಾತ್ರಿ ಫೋರ್ಟ್ ಕೊಚ್ಚಿ ಬೋಟ್ ಜೆಟ್ಟಿ ಬಳಿ ಎಸ್‌ಐಒ ನಿರ್ಮಿಸಿದ್ದ ಪೋಸ್ಟರ್ ಅನ್ನು ಹರಿದು ಹಾಕಿದ್ದಾರೆ. ಕೆಲ ಸ್ಥಳೀಯ ಯುವಕರು ಮಹಿಳೆಯರನ್ನು ಪ್ರಶ್ನಿಸಿದ್ದು, ಎರಡು ಕಡೆಯವರ ನಡುವೆ ತೀವ್ರ ವಾಗ್ವಾದ ನಡೆದಿದೆ.

Advertisements

ಇದನ್ನು ಓದಿದ್ದೀರಾ?  ಬೆಂಗಳೂರು | ಪ್ಯಾಲೆಸ್ತೀನ್ ಸ್ವಾತಂತ್ರ್ಯಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಮೊಳಗಿದ ಘೋಷ

ಮಂಗಳವಾರ, ಎಸ್‌ಐಒ ಪ್ರದೇಶದ ನಾಯಕ ಕೆ ಎಸ್ ಅಜೀಂ ಅವರು ಮಹಿಳೆಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಎಸ್‌ಐಒ ಕಾರ್ಯಕರ್ತರು ಮಹಿಳೆಯೊಬ್ಬರನ್ನು ಫೋರ್ಟ್ ಕೊಚ್ಚಿ ಬಳಿಯ ಹೋಂಸ್ಟೇಯಲ್ಲಿ ಇರುವುದಾಗಿ ಪತ್ತೆ ಹಚ್ಚಿದ್ದಾರೆ.

ದೂರಿನ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆಂದು ಆರೋಪಿಸಿ ಎಸ್‌ಐಒ ಕಾರ್ಯಕರ್ತರು ಮಂಗಳವಾರ ರಾತ್ರಿ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದು ಪೊಲೀಸರು ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಅದಾದ ಬಳಿಕ ಪ್ರಕರಣ ದಾಖಲಿಸಲಾಗಿದೆ.

“ಹೊಸ ವರ್ಷದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟರ್ ಗಳನ್ನು ಹಾಕಲಾಗಿತ್ತು. ಪೋಸ್ಟರ್‌ಗಳನ್ನು ಹಾಕಲು ಯಾವುದೇ ಅನುಮತಿ ಇಲ್ಲ. ಆದರೆ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಿಂದ ತೆಗೆದುಹಾಕುವ ಕಾರ್ಯ ಸ್ಥಳೀಯ ನಾಗರಿಕ ಸಂಸ್ಥೆಗೆ ಬಿಟ್ಟಿರುವುದು” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X