ಎನ್‌ಸಿಇಆರ್‌ಟಿ | ಪಠ್ಯ ಪರಿಷ್ಕರಣೆಗೆ ಸಮ್ಮತಿಸದ ಕೇರಳ ಸರ್ಕಾರ

Date:

  • ಎಲ್ಲ ರಾಜ್ಯಗಳ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಪಠ್ಯ ಪರಿಷ್ಕರಣೆಗೆ ಒತ್ತಾಯ
  • ವಿದ್ಯಾರ್ಥಿಗಳಿಗೆ ಮೂಲ ಪಠ್ಯ ಬೋಧಿಸಲು ಕೇರಳ ಸರ್ಕಾರ ನಿರ್ಧಾರ ಎಂದ ಸಚಿವ

ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿ (ಎನ್‌ಸಿಇಆರ್‌ಟಿ) ಸೈದ್ಧಾಂತಿಕ ನೆಲೆಯಲ್ಲಿ ಪಠ್ಯ ಪರಿಷ್ಕರಣೆ ಮಾಡಿರುವುದನ್ನು ಕೇರಳ ಸರ್ಕಾರ ಅಸಮಧಾನ ವ್ಯಕ್ತಪಡಿಸಿದೆ.

ಈ ಕುರಿತು ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಶನಿವಾರ (ಏಪ್ರಿಲ್‌ 8) ಹೇಳಿಕೆ ನೀಡಿದ್ದು, ಸೈದ್ಧಾಂತಿಕ ನೆಲೆಯಲ್ಲಿ ಪಠ್ಯದ ಅನೇಕ ಭಾಗಗಳನ್ನು ಅಳಿಸಿ ಹಾಕಿರುವ ಮಂಡಳಿ ನಿರ್ಧಾರವನ್ನು ಕೇರಳ ಸರ್ಕಾರ ಒಪ್ಪುವುದಿಲ್ಲ. ಮಂಡಳಿಯು ಮತ್ತೊಮ್ಮೆ ಎಲ್ಲ ರಾಜ್ಯಗಳ ಪ್ರತಿನಿಧಿಗಳ ಜೊತೆ ಚರ್ಚಿಸಿ ಪಠ್ಯ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

“12ನೇ ತರಗತಿಯ ಇತಿಹಾಸ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ನಂತರದ ಅವಧಿಯ ಭಾಗಗಳನ್ನು ತೆಗೆದುಹಾಕಿರುವುದಕ್ಕೆ ಕೇರಳ ಸರ್ಕಾರದ ಅಸಮ್ಮತಿಯಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ” ಎಂದು ಶಿವನ್‌ಕುಟ್ಟಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವರ್ಷ ಪಠ್ಯಕ್ರಮದಲ್ಲಿ ಸೈದ್ಧಾಂತಿಕ ನೆಲೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದ ಸಂದರ್ಭದಲ್ಲಿ ಎನ್‌ಸಿಇಆರ್‌ಟಿ ಅಳಿಸಿ ಹಾಕಿದ ಕೆಲವು ಬಾಗಗಳು ವಿವಾದ ಸೃಷ್ಟಿಸಿದ್ದವು. ಮಂಡಳಿ ಸೂಚಿಸಿದ ವಿಜ್ಞಾನ ವಿಷಯದ ಭಾಗಗಳಿಗೆ ಕೇರಳ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ ಮಂಡಳಿ ಅಳಿಸಿ ಹಾಕಿದ ಮಾನವೀಯ ವಿಷಯದ ಭಾಗಗಳನ್ನು ಕೇರಳ ಶಿಕ್ಷಣ ಇಲಾಖೆ ಮತ್ತೆ ಸೇರಿಸಿತ್ತು.

ಕೇರಳ ಶೈಕ್ಷಣಿಕ ಮಂಡಳಿ ಮತ್ತು ಎನ್‌ಸಿಇಆರ್‌ಟಿ ಜತೆ ಮಾಡಿಕೊಂಡ ಒಪ್ಪಂದದ ಭಾಗವಾಗಿ ಪ್ರತಿವರ್ಷ ಪಠ್ಯ ಪುಸ್ತಕಗಳನ್ನು ಮರುಮುದ್ರಣ ಮಾಡಲಾಗುತ್ತದೆ. ಆದರೆ ಈ ಬಾರಿ ಮಂಡಳಿಯೇ ತಾನು ಕೈಬಿಟ್ಟ ಪಠ್ಯದ ಭಾಗಗಳನ್ನು ಹೊರತುಪಡಿಸಿ ಉಳಿದ ಪಠ್ಯಪುಸ್ತಕಗಳನ್ನು ಮುದ್ರಿಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಅಣ್ಣನ ಜೊತೆ ಜಗಳ; ಕೋಪದಲ್ಲಿ ಮೊಬೈಲ್‌ ನುಂಗಿದ 15 ವರ್ಷದ ಬಾಲಕಿ!

“ಕೇರಳ ಸರ್ಕಾರ ಎನ್‌ಸಿಇಆರ್‌ಟಿನಿಂದ ಅಳಿಸದ ಭಾಗಗಳಿರುವ ಪಠ್ಯವನ್ನು ಪಡೆಯಲಿದೆ. ಇದನ್ನೇ ಮಕ್ಕಳಿಗೆ ಕಲಿಸಲು ನೀಡಲಾಗುತ್ತದೆ” ಎಂದು ಕೇರಳ ಸರ್ಕಾರದ ಅಧಿಕಾರಿಯೊಬ್ಬರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...