ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ ಕೋರಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್

Date:

  • ಅಶ್ಲೀಲ ಸಂದೇಶಗಳು ಟೆಲಿಗ್ರಾಂನಲ್ಲಿ ಹಂಚಿಕೆಯಾಗುತ್ತಿವೆ ಎಂದು ಆರೋಪ
  • ನ್ಯಾ. ಎಸ್‌ ಮಣಿಕುಮಾರ್, ನ್ಯಾ. ಮುರಳಿ ಪುರುಷೋತ್ತಮನ್ ಪೀಠ ವಿಚಾರಣೆ

ಭಾರತದಲ್ಲಿ ತ್ವರಿತ ಸಂದೇಶ ನೀಡುವ ಟೆಲಿಗ್ರಾಂ ಸೇವೆಗೆ ನಿರ್ಬಂಧ ವಿಧಿಸುವಂತೆ ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ (ಮಾರ್ಚ್‌ 23) ವಜಾಗೊಳಿಸಿದೆ.

ಈ ಸಂಬಂಧ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌ ಮಣಿಕುಮಾರ್‌ ಮತ್ತು ಮುರಳಿ ಪುರುಷೋತ್ತಮನ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಆಕ್ಷೇಪಾರ್ಹ ಸಂಗತಿಗಳನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ನಿಯಮಗಳು, 2021 (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್‌ ಮಾಧ್ಯಮ ನೀತಿ ಸಂಹಿತೆ) ಅಡಿಯಲ್ಲಿ ನೇಮಕಗೊಂಡಿರುವ ಕುಂದು ಕೊರತೆ ಅಧಿಕಾರಿಗೆ ಅರ್ಜಿದಾರರು ಮನವಿ ಸಲ್ಲಿಸಬಹುದು ಎಂದು ಸೂಚಿಸಿ ಪೀಠ ಅರ್ಜಿ ವಿಲೇವಾರಿ ಮಾಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇಂದ್ರ ಸರ್ಕಾರದ ಪರ ವಕೀಲರ ಮೂಲಕ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಮಹಿಳೆಯರು ಮತ್ತು ಮಕ್ಕಳ ಕುರಿತ ಅಶ್ಲೀಲ ಸಂಗತಿಗಳು ಟೆಲಿಗ್ರಾಂ ಸಂದೇಶದಲ್ಲಿ ಹಂಚಿಕೆಯಾಗುತ್ತಿವೆ ಎಂದು ಮಹಿಳೆ ಅರ್ಜಿಯಲ್ಲಿ ದೂರಿದ್ದರು.

“ಭಯೋತ್ಪಾದನೆ ಪ್ರಸಾರ ಮಾಡಲು ಮತ್ತು ಸಮಾಜದಲ್ಲಿ ಅನಿಶ್ಚಿತ ವಾತಾವರಣ ಸೃಷ್ಟಿಸಲು ಟೆಲಿಗ್ರಾಂ ವೇದಿಕೆಯನ್ನು ಬಳಸಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಟೆಲಿಗ್ರಾಂಗೆ ನಿರ್ದಿಷ್ಟ ಯೋಜನಾ ಅಧಿಕಾರಿ ಅಥವಾ ನೋಂದಾಯಿತ ಕಚೇರಿ ಇಲ್ಲ. ಇದರಲ್ಲಿ ಬಳಕೆದಾರರು ತಮ್ಮ ಗುರುತು ಬಹಿರಂಗಪಡಿಸುವ ಅಗತ್ಯವಿಲ್ಲದ ಕಾರಣ ತನಿಖಾ ಸಂಸ್ಥೆಗಳು ಸೂಕ್ತ ತನಿಖೆ ನಡೆಸಿಲ್ಲ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ಕುಂದು ಕೊರತೆ ಅಧಿಕಾರಿಗೆ ದೂರು ಸಲ್ಲಿಸುವ ಬದಲಿಗೆ ಸೈಬರ್‌ ಕ್ರೈಂ ಘಟಕ ಅಥವಾ ಸಂಬಂಧಿತ ಸೂಕ್ತ ಕಾನೂನಿನಡಿ ದೂರು ದಾಖಲಿಸಬಹುದು ಎಂದು ಕೇಂದ್ರ ಸರ್ಕಾರದ ಪರ ವಕೀಲರು ತಿಳಿಸಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ...