ಕೇರಳ | ಕಂದಕಕ್ಕೆ ಉರುಳಿದ ಬಸ್; ನಾಲ್ವರ ಸಾವು, 32 ಮಂದಿಗೆ ಗಾಯ

Date:

Advertisements

ಕೇರಳ ರಾಜ್ಯ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಒಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 32 ಮಂದಿ ಗಾಯಗೊಂಡ ಘಟನೆ ಕೇರಳದ ಪುಪ್ಪುಪರದಲ್ಲಿ ನಡೆದಿದೆ.

ತಮಿಳುನಾಡಿನ ತಂಜವೂರಿನಲ್ಲಿ ಪ್ರವಾಸದ ಬಳಿಕ ಬಸ್ ಮಾವೇಲಿಕ್ಕಾರಕ್ಕೆ ವಾಪಸ್ ಬರುತ್ತಿತ್ತು. ಇಡುಕ್ಕಿ ಜಿಲ್ಲೆಯ ಕಲ್ಲಿವಯಾಲ್ ಎಸ್ಟೇಟ್‌ ಬಳಿ 6:15ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಕೇರಳ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಶಿಕ್ಷಕನಿಗೆ 111 ವರ್ಷ ಜೈಲು ಶಿಕ್ಷೆ

Advertisements

ಮೃತರನ್ನು ಅರುಣ್ ಹರಿ (55), ರಮ ಮೋಹನ್ (40), ಸಂಗೀತ್ (45) ಮತ್ತು ಬಿಂಧು ಉನ್ನಿತ್ತಾನ್ (59) ಎಂದು ಗುರುತಿಸಲಾಗಿದ್ದು, ಎಲ್ಲರೂ ಮಾವೇಲಿಕ್ಕಾರ ನಿವಾಸಿಗಳೆಂದು ಹೇಳಲಾಗಿದೆ.

ಪ್ರಾಥಮಿಕ ವರದಿ ಪ್ರಕಾರ ಬಸ್ ಬ್ರೇಕ್ ಫೇಲ್ ಆಗಿದೆ ಎಂದು ತಿಳಿದುಬಂದಿದೆ. ಬಸ್ ಸುಮಾರು 70 ಅಡಿ ಆಳದ ಕಂದರಕ್ಕೆ ಉರುಳಿದ್ದು ಮರದ ಮೇಲೆ ಬಿದ್ದಿದೆ. ಇದರಿಂದಾಗಿ ಹೆಚ್ಚಿನ ಸಾವುನೋವುಗಳ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪುರುಷ ಭಕ್ತರ ಮೇಲಂಗಿ ತೆಗೆಯುವ ಅನಿಷ್ಟ ಪದ್ಧತಿ ಕೈಬಿಡಲು ನಿರ್ಧಾರ: ಕೇರಳ ಸಿಎಂ

ಸ್ಥಳೀಯ ನಿವಾಸಿಗಳು, ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸೇರಿದಂತೆ ಹಲವು ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಗಾಯಾಳುಗಳನ್ನು ಮುಂಡಕಯಂ ಮೆಡಿಕಲ್ ಟ್ರಸ್ಟ್ ಆಸ್ಪತ್ರೆ ಮತ್ತು ಮಾರ್ ಸ್ಲೀವಾ ಮೆಡಿಸಿಟಿಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

ಭಾನುವಾರ ಬೆಳಗ್ಗೆ ಮಾವೇಲಿಕ್ಕಾರದಿಂದ ಬಸ್‌ ಹೊರಟಿದ್ದು, ಸೋಮವಾರ ಮುಂಜಾನೆ ಹಿಂತಿರುಗಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X