ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತೆಯ ಅಪಹರಣ; ವಿಡಿಯೋ ವೈರಲ್

Date:

Advertisements

ಶಾಲೆಯ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಈ ಅಪಹರಣದ ಸಿಸಿಟಿವಿ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರ ತವರು ಜಿಲ್ಲೆ ಭರತ್‌ಪುರದಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ಬಾಲಕಿಯನ್ನು ಯುವಕರು ಅಪಹರಿಸಿ ಎಸ್‌ಯುವಿಯಲ್ಲಿ ಕರೆದೊಯ್ದಿದ್ದಾರೆ. ಜೊತೆಗೆ ಬಾಲಕಿಯನ್ನು ಕಾಪಾಡಲು ಜನರು ಬಂದಾಗ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

Advertisements

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ಮತ್ತು ರಾಜಕೀಯ ಟೀಕೆಗೆ ಕಾರಣವಾಗಿದೆ. ಅಪಹರಣವಾದ ಬಾಲಕಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಸೋಮವಾರ ಅರ್ಧವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಆಕೆ ಬರುವುದನ್ನೇ ಕಾಯುತ್ತಿದ್ದ ಅಪಹರಣಕಾರರು ಆಕೆಯನ್ನು ಬಲವಂತವಾಗಿ ತಮ್ಮ ವಾಹನಕ್ಕೆ ಎಳೆದೊಯ್ದಿದ್ದಾರೆ. ಆಕೆಯ ಸ್ನೇಹಿತರು ಆಕೆಯನ್ನು ರಕ್ಷಿಸಲು ಮುಂದಾದಾಗ ಅಪಹರಣಕಾರರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಇನ್ನು ಬಾಲಕಿಯ ತಂದೆ ಆಕೆಯ ‘ಭಾವಿ ಪತಿಯ ಮನೆಯವರು’ ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಆಟಾ-ಸಾಟಾ ಪದ್ಧತಿಯ ಪ್ರಕಾರ ಬಾಲ್ಯ ವಿವಾಹ ಮಾಡಲಾಗಿದೆ. ಔಪಚಾರಿಕವಾಗಿ ವಿವಾಹವಾಗಿದ್ದರೂ ಬಾಲಕಿ ವಯಸ್ಕಳಾಗುವವರೆಗೂ ಪತಿಯೊಂದಿಗೆ ಜೀವಿಸುತ್ತಿರಲಿಲ್ಲಿ.

ಇನ್ನು ವರದಕ್ಷಿಣೆ ವಿಚಾರದಲ್ಲಿ ಉಭಯ ಕುಟುಂಬದ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಹೇಳಲಾಗಿದೆ. ಇದೇ ವಿಚಾರದಲ್ಲಿ ಅಪಹರಣ ಮಾಡಲಾಗಿದೆ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ಈ ಘಟನೆ ನಡೆದು 24 ಗಂಟೆಗಳು ಕಳೆದಿದ್ದು ಇನ್ನೂ ಬಾಲಕಿಯ ಪತ್ತೆಯಾಗಿಲ್ಲ. ಅಪಹರಣಕಾರರು ಯಾವುದೇ ಬೇಡಿಕೆಯನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X