ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ಔಟ್‌; ‘ಆರ್‌ಸಿಬಿ’ ಸೇರ್ತಾರಾ?

Date:

Advertisements

ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌ ರಾಹುಲ್‌ ಅವರು ಐಪಿಎಲ್‌ನಲ್ಲಿ ‘ಲಕ್ನೋ ಸೂಪರ್ ಜೈಂಟ್ಸ್’ (ಎಲ್‌ಎಸ್‌ಜಿ) ಇಂದ ಹೊರಬಂದಿದ್ದಾರೆ. ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಕಾರಣಗಳಿಂದ ಎಲ್‌ಎಸ್‌ಜಿ ತೊರೆದಿದ್ದಾರೆ ಎಂದು ವರದಿಯಾಗಿದೆ. ಆರ್‌ಸಿಬಿಯೂ ಸೇರಿದಂತೆ ನಾಲ್ಕು ತಂಡಗಳು ಅವರನ್ನು ಸೇರಿಸಿಕೊಳ್ಳಲು ಉತ್ಸಕವಾಗಿವೆ.

ಆಗಸ್ಟ್ 26 ರಂದು, ಕೆ.ಎಲ್‌ ರಾಹುಲ್ ಅವರು ಎಲ್‌ಎಸ್‌ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು ಕೋಲ್ಕತ್ತಾದಲ್ಲಿ ಭೇಟಿ ಮಾಡಿದ್ದರು. ಅವರ ಭೇಟಿಯು ರಾಹುಲ್ ಎಲ್‌ಎಸ್‌ಜಿಯನ್ನು ಮುಂದಿನ ಪಂದ್ಯಾವಳಿಯಲ್ಲಿಯೂ ಮುನ್ನಡೆಸಬಹುದು ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತು. ಜೊತೆಗೆ, ಅವರಿಗೆ ಹೆಚ್ಚಿನ ಸಂಭಾವನೆ ನೀಡುವುದಾಗಿ ಎಲ್‌ಎಸ್‌ಜಿ ಪ್ರಾಂಚೈಸಿ ಭರವಸೆ ನೀಡಿತ್ತು. ಆದಾಗ್ಯೂ, ಅವರು ತಂಡವನ್ನು ತೊರೆಯಲು ನಿರ್ಧಿಸಿದ್ದಾರೆ.

ಕೆ.ಎಲ್‌ ರಾಹುಲ್ ಭಾರತ ಕ್ರಿಕೆಟ್‌ ತಂಡದ ಅತ್ಯಂತ ಹಿರಿಯ ಆಟಗಾರ. ಅವರು ಕೇವಲ ವಿಕೆಟ್ ಕೀಪರ್-ಬ್ಯಾಟರ್ ಮಾತ್ರವಲ್ಲದೆ, ಆಲ್‌ರೌಡರ್‌ ಆಗಿಯೂ ಆಟವಾಡಬಲ್ಲ ಸಾಮರ್ಥ್ಯ ಉಳ್ಳಾವರು. ಅವರು ಈ ಹಿಂದೆ ಪಂಜಾಬ್ ಕಿಂಗ್ಸ್‌ ತಂಡವನ್ನು ಮುನ್ನಡೆಸಿದ್ದರು. ಕಳೆದೆರಡು ಟೂರ್ನಿಗಳಲ್ಲಿ ಎಲ್‌ಎಸ್‌ಜಿ ತಂಡದ ನಾಯಕರಾಗಿದ್ದರು. ಸದ್ಯ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಫಾರ್ಮ್ ಸ್ವಲ್ಪ ಕ್ಷೀಣಿಸಿದರೂ, ಬೇಡಿಕೆಯ ಆಟಗಾರರಾಗಿದ್ದಾರೆ.

Advertisements

ಸದ್ಯಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ನಾಲ್ಕು ಫ್ರಾಂಚೈಸಿಗಳು ಅವರನ್ನು ಹರಾಜಿನಲ್ಲಿ ಖರೀದಿಸಲು ಮುಂದಾಗಿವೆ. ಅವರನ್ನು ಹೆಚ್ಚಿನ ಮೊತ್ತದೊಂದಿಗೆ ಆರ್‌ಸಿಬಿ ಖರೀದಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಮೆಗಾ ಹರಾಜಿಗೆ ಮುಂಚಿತವಾಗಿ ಬಿಡುಗಡೆಯಾದ ಐಪಿಎಲ್ ಸಂಭಾವನೆಯ ಪ್ರಕಾರ, ಈ ಬಾರಿ ಹರಾಜಿನಲ್ಲಿ ಪ್ರತಿ ಪ್ರಾಚೈಸಿಯು ತನ್ನ ತಂಡಕ್ಕೆ ಆಟಗಾರರನ್ನು ಕೊಳ್ಳಲು 120 ಕೋಟಿ ರೂ.ವರೆಗೆ ಖರ್ಚು ಮಾಡಬಹುದು. ಅದರಲ್ಲಿ, ಮೊದಲ ಆಟಗಾರನಿಗೆ ತಂಡವು 18 ಕೋಟಿ ರೂ.ವರೆಗೆ ಸಂಭಾವನೆ ನೀಡಬಹುದು. ಎರಡನೇ ಅಥವಾ ಕ್ಯಾಪ್ಡ್‌ ಆಟಗಾರರಿಗೆ 14 ಕೋಟಿ ರೂ. ಹಾಗೂ ಅನ್‌ಕ್ಯಾಪ್ಡ್ ಆಟಗಾರರಿಗೆ ತಲಾ 4 ಕೋಟಿ ರೂ. ಭರಿಸಬಹುದು.

ಒಂದು ತಂಡವು ಐವರು ಕ್ಯಾಪ್ಡ್ ಆಟಗಾರರನ್ನು ಖರೀದಿಸಿದರೆ, ಆ ತಂಡವು ಹರಾಜು ಮಡಕೆಯಿಂದ 75 ಕೋಟಿ ರೂ.ಗಳನ್ನು ಆ ಐವರಿಗೆ ವ್ಯಯಿಸಬೇಕಾಗುತ್ತದೆ. ನವೆಂಬರ್‌ನಲ್ಲಿ ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X