ಟೆಸ್ಟ್‌ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ; ಬಿಸಿಸಿಐ ಹೇಳಿದ್ದೇನು?

Date:

Advertisements

ಭಾರತದ ಬ್ಯಾಟ್ಸ್‌ಮನ್, ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಮುಂದಾಗಿದ್ದಾರೆ. ಈ ಕುರಿತು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಜೂನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ವಿದಾಯ ಹೇಳಲು ಮುಂದಾಗಿದ್ದಾರೆ. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ವಿಮರ್ಶಿಸಿಕೊಳ್ಳುವಂತೆ ಬಿಸಿಸಿಐ ಸಲಹೆ ನೀಡಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಂಡದ ನಾಯಕರಾಗಿದ್ದ ಅನುಭವಿ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಕೂಡ ಕೆಲ ದಿನಗಳ ಹಿಂದಷ್ಟೇ ಈ ಮಾದರಿಗೆ ವಿದಾಯ ಹೇಳಿದ್ದಾರೆ. ಇದೀಗ ಕೊಹ್ಲಿ ಟೆಸ್ಟ್‌ನಿಂದ ಹಿಂದೆ ಸರಿಯಲು ಇಚ್ಛಿಸಿದ್ದಾರೆ. ಅವರ ನಿರ್ಧಾರದ ಕುರಿತು ಅಂತಿಮ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಒಂದು ವೇಳೆ ಅವರು ನಿವೃತ್ತಿ ನಿರ್ಧಾರಕ್ಕೆ ಬದ್ಧರಾದರೆ, ಭಾರತೀಯ ತಂಡದಲ್ಲಿ ನಾಯಕತ್ವ ಹಾಗೂ ಅನುಭವದ ಕೊರತೆಯ ಸಮಸ್ಯೆ ಉಂಟಾಗಬಹುದು.

Advertisements

ಕೊಹ್ಲಿ ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2024ರ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಭಾರತ ಗೆದ್ದ ನಂತರ, ಕೊಹ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿ ಘೋಷಿಸಿದರು. ಆ ಫೈನಲ್ ಪಂದ್ಯದಲ್ಲಿ ಅವರು 59 ಎಸೆತಗಳಲ್ಲಿ 76 ರನ್ ಗಳಿಸಿ ಪಂದ್ಯಶ್ರೇಷ್ಠರಾಗಿದ್ದರು.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

ವಿರಾಟ್ 2014 ರಿಂದ 2022 ರವರೆಗೆ ಟೆಸ್ಟ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿ, 40 ಗೆಲುವು ದಾಖಲಿಸಿದ್ದಾರೆ. ಇದು ಭಾರತೀಯ ಟೆಸ್ಟ್ ನಾಯಕನಾಗಿ ಅತ್ಯುತ್ತಮ ಸಾಧನೆಯಾಗಿದ್ದು, ಎಂ ಎಸ್ ಧೋನಿ ಅವರ 60 ಪಂದ್ಯಗಳ ನಾಯಕತ್ವದ ದಾಖಲೆ ಮುರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X