ಕೋಲ್ಕತ್ತಾ ಅತ್ಯಾಚಾರ-ಕೊಲೆ | ಪ್ರಕರಣ ಮುಚ್ಚಿಹಾಕಲು ಪೋಷಕರಿಗೆ ಹಣ ಕೊಡಲು ಯತ್ನಿಸಿದ್ದ ಪೊಲೀಸರು

Date:

Advertisements

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪ್ರಕರಣವನ್ನು ಮುಚ್ಚಿಹಾಕಲು ಸಂತ್ರಸ್ತೆಯ ಪೋಷಕರಿಗೆ ಹಣ ಕೊಡಲು ಪೊಲೀಸರು ಪ್ರಯತ್ನಿಸಿದ್ದರು. ಮಾತ್ರವಲ್ಲದೆ, ಸಂತ್ರಸ್ತೆಯ ಮೃತದೇಹವನ್ನು ತ್ವರಿತವಾಗಿ ಸುಟ್ಟು ಹಾಕುವ ಮೂಲಕ ಪ್ರಕರಣವನ್ನು ತಿರುಚಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಸ್ವತಃ ಮೃತ ವೈದ್ಯೆಯ ಕುಟುಂಬವೇ ಈ ಆರೋಪ ಮಾಡಿದೆ.

ವೈದ್ಯೆಯ ಅತ್ಯಾಚಾರ-ಕೊಲೆಯ ವಿರುದ್ಧ ಪ್ರತಿಭಟನಾನಿರತ ವೈದ್ಯರೊಂದಿಗೆ ಸಂತ್ರಸ್ತೆಯ ಕುಟುಂಬ ಪ್ರತಿಭಟನೆಗೆ ಇಳಿದಿದೆ. ಆರ್‌ಜಿ ಕರ್ ಆಸ್ಪತ್ರೆ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕುಟುಂಬವು ಭಾಗವಹಿಸಿದೆ. “ಆಗಸ್ಟ್‌ 9ರಂದು ಘಟನೆ ನಡೆದು, ಘಟನೆ ಬೆಳಕಿಗೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ (ಲಂಚ) ನೀಡಲು ಪ್ರಯತ್ನಿಸಿದರು” ಎಂದು ಕುಟುಂಬ ಆರೋಪಿಸಿದೆ.

“ಪೊಲೀಸರು ಮೊದಲಿನಿಂದಲೂ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದರು. ಮೃತದೇಹವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ ನೀಡಲು ಮುಂದಾಗಿದ್ದರು. ಅವರ ಹಣವನ್ನು ನಾವು ತಕ್ಷಣ ನಿರಾಕರಿಸಿದ್ದೇವೆ” ಎಂದು ಮೃತ ವೈದ್ಯರ ತಂದೆ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X