ಘಟನೆಯ ದಿನ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಕೋಲ್ಕತ್ತಾ ಅತ್ಯಾಚಾರ ಆರೋಪಿ

Date:

Advertisements

ಕೋಲ್ಕತ್ತಾದ ಆರ್​ಜಿ ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌​ ಆಗಸ್ಟ್‌ 9ರ ಘಟನೆಯ ದಿನ ಉನ್ನತ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೋಲ್ಕತ್ತಾ ಪೊಲೀಸ್​ ಇಲಾಖೆಯಲ್ಲಿ ಸ್ವಯಂಸೇವಕನಾಗಿದ್ದ ಸಂಜಯ್ ರಾಯ್‌ ಅಂದು ಮುಂಬೈನ ರೆಡ್​ ಲೈಟ್ ಏರಿಯಾಗೆ ಹೋಗುವಾಗ ಬಳಸಿದ್ದು ಇದೇ ಅಧಿಕಾರಿಯ ಬೈಕ್ ಆಗಿತ್ತು. ಆರೋಪಿ ಕುಡಿದ ಅಮಲಿನಲ್ಲಿ 15 ಕಿ.ಮೀ ದೂರದವರೆಗೆ ಬೈಕ್ ಚಲಾಯಿಸಿದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಬೈಕ್ 2014 ರಲ್ಲಿ ನೋಂದಾಯಿಸಲ್ಪಟ್ಟಿದೆ. ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ವಾಹನವನ್ನು ವಶಪಡಿಸಿಕೊಂಡಿದೆ. ಬೈಕ್​ನಲ್ಲಿ ಕೆಪಿ ಅಂದರೆ ಕೋಲ್ಕತ್ತಾ ಪೊಲೀಸ್​ ಎಂದು ಬರೆಯಲಾಗಿದೆ. ಸಂಜಯ್ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡು ಎಲ್ಲರನ್ನೂ ಬೆದರಿಸುತ್ತಿದ್ದ. ಈ ಬೈಕ್ ಹಿರಿಯ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನೋಂದಣಿಯಾಗಿದೆ. ಆಗಸ್ಟ್ 9 ರ ಘಟನೆಯ ನಂತರ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ಸಂಜಯ್ ರಾಯ್‌ನನ್ನು ಬಂಧಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದರ್ಶನಾತಿಥ್ಯ- ಪೊಲೀಸರಿಂದ ಪೊಲೀಸರಿಗಾದ ಅವಮಾನ

ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಕೊಠಡಿಗೆ ಬಂದಾಗ ಮಹಿಳಾ ವೈದ್ಯೆ ಆಗಲೇ ಮೃತಪಟ್ಟಿದ್ದಳು ಎಂದು ಆರೋಪಿ ಸಂಜಯ್ ರಾಯ್​ ಪಾಲಿಗ್ರಾಫ್​ ಪರೀಕ್ಷೆ ವೇಳೆ ಹೇಳಿಕೆ ನೀಡಿದ್ದಾನೆ. ಅತ್ಯಾಚಾರ, ಕೊಲೆ ಮಾಡಿದ್ದು ನಾನೇ ಎಂದು ಈಗಾಗಲೇ ಒಪ್ಪಿಕೊಂಡಿರುವ ಸಂಜಯ್ ರಾಯ್ ಇದೀಗ ಸುಳ್ಳು ಹೇಳುತ್ತಿದ್ದಾನೆ. ಅಂದು ನಾನು ಸೆಮಿನಾರ್​ ಕೊಠಡಿಗೆ ಹೋಗುವ ಮೊದಲು ಆಕೆ ಸಾವನ್ನಪ್ಪಿದ್ದಳು, ನಾನು ನಿರಪರಾಧಿ ಎಂದು ಹೇಳಿದ್ದಾನೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ಜೈಲಿನಲ್ಲಿ ಸಿಬಿಐ ಅಧಿಕಾರಿಗಳು ಆರೋಪಿ ಸಂಜಯ್ ರಾಯ್‌ನ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಿದ್ದರು. ಸುಳ್ಳು ಪತ್ತೆ ಪರೀಕ್ಷೆ ವೇಳೆ ಸುಳ್ಳು ಹಾಗೂ ಅನುಮಾನಾಸ್ಪದ ಉತ್ತರಗಳನ್ನು ಗುರುತಿಸಲಾಗಿದೆ. ಸಂಜಯ್ ರಾಯ್ ಆ ವೇಳೆ ಆತಂಕಗೊಂಡಿದ್ದು, ಸಿಬಿಐ ಹಲವು ಸಾಕ್ಷ್ಯಗಳನ್ನು ಮುಂದಿಟ್ಟರೂ ಆತ ಸಮರ್ಥನೆ ನೀಡುತ್ತಲೇ ಇದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X