ಕ್ಷೌರಿಕನ ಕಷ್ಟ, ಸುಖಗಳನ್ನು ಆಲಿಸಿದ ರಾಹುಲ್ ಗಾಂಧಿ

Date:

Advertisements

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಸ್ಥಳೀಯ ಕ್ಷೌರದ ಅಂಗಡಿಗೆ ಭೇಟಿ ನೀಡಿ ಕ್ಷೌರಿಕನ ಜೊತೆ ಮಾತನಾಡುತ್ತಾ ಅವರ ಕಷ್ಟ, ಸುಖಗಳನ್ನು ಆಲಿಸಿದ್ದಾರೆ.

ಉತ್ತಮ್ ನಗರದ ಪ್ರಜಾಪತ್ ಕಾಲೋನಿಯಲ್ಲಿರುವ ಕ್ಷೌರಿದ ಅಂಗಡಿಗೆ ಭೇಟಿ ನೀಡಿದ ವಿಡಿಯೋವನ್ನು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಗಡ್ಡವನ್ನು ಟ್ರಿಮ್ ಮಾಡುವಾಗ ಕ್ಷೌರಿಕರ ಸಮಸ್ಯೆಗಳನ್ನು ಕೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರ ಕಷ್ಟಪಟ್ಟು ದುಡಿಯುವ ಬಡ ಜನರ ಕನಸುಗಳನ್ನು ಕಸಿದುಕೊಂಡಿದೆ. ಆದ್ದರಿಂದ ಉಳಿತಾಯವನ್ನು ಉತ್ತೇಜಿಸುವ ಹೊಸ ಯೋಜನೆಗಳ ಜಾರಿ ಅವಶ್ಯಕತೆಯಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ವಿಡಿಯೋದಲ್ಲಿ ರಾಹುಲ್ ಕುರ್ಚಿಯ ಮೇಲೆ ಕುಳಿತಿದ್ದಾರೆ, ಅಜಿತ್ ಎಂಬ ಕ್ಷೌರಿಕ ರಾಹುಲ್ ಗಾಂಧಿಯ ಗಡ್ಡವನ್ನು ಟ್ರಿಮ್ ಮಾಡುತ್ತಾ ತನ್ನ ಕಥೆಯನ್ನು ಅವರ ಜೊತೆ ಹಂಚಿಕೊಂಡಿದ್ದಾರೆ.

“‘”ಉಳಿತಾಯಕ್ಕೆ ಏನೂ ಉಳಿದಿಲ್ಲ!’ ಅಜಿತ್ ಭಾಯ್ ಅವರ ಮಾತುಗಳು ಮತ್ತು ಅವರ ಕಣ್ಣೀರು ಇಂದು ಭಾರತದ ಪ್ರತಿಯೊಬ್ಬ ಕಷ್ಟಪಟ್ಟು ದುಡಿಯುವ ಬಡ ಮತ್ತು ಮಧ್ಯಮ ವರ್ಗದ ವ್ಯಕ್ತಿಯ ಕಥೆಯನ್ನು ಹೇಳುತ್ತದೆ. ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರವು ಕ್ಷೌರಿಕರು, ಚಮ್ಮಾರರು, ಕುಂಬಾರರು, ಬಡಗಿಗಳು ಸೇರಿದಂತೆ ಕಾರ್ಮಿಕ ವರ್ಗದ ಅಂಗಡಿ, ಮನೆ ಮತ್ತು ಸ್ವಾಭಿಮಾನದ ಕನಸುಗಳನ್ನು ಕಸಿದುಕೊಂಡಿದೆ” ಎಂದು ರಾಹುಲ್ ಗಾಂಧಿ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X