ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

Date:

Advertisements

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹೇಳಿದ್ದು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ನ್ಯಾಯಾಧೀಶರಿಂದ ಅಲ್ಪಸಂಖ್ಯಾತ ಸಮುದಾಯವು ಹೇಗೆ ನ್ಯಾಯವನ್ನು ನಿರೀಕ್ಷಿಸುವುದು” ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಭಾನುವಾರ ಪ್ರಯಾಗರಾಜ್‌ನಲ್ಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ ಕುರಿತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್‌ನ ಕಾನೂನು ಘಟಕ ಆಯೋಜಿಸಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು | ಅಕ್ರಮ ವಾಸ; ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

Advertisements

“ಇದು ಹಿಂದೂಸ್ತಾನ, ಈ ದೇಶವು ಹಿಂದೂಸ್ತಾನದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಇದು ಕಾನೂನು. ಹೈಕೋರ್ಟ್ ನ್ಯಾಯಾಧೀಶರಾಗಿ ನೀವು ಹೀಗೆ ಹೇಳುತ್ತಿದ್ದೀರಾ ಎಂದು ನೀವು ಹೇಳುವಂತಿಲ್ಲ” ಎಂದು ಹೇಳಿದರು.

“ನಮ್ಮ ಕಾನೂನು ಬಹುಸಂಖ್ಯಾತರ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುದನ್ನು ಕುಟುಂಬ ಮತ್ತು ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೆಯೋ ಅದನ್ನು ಮಾತ್ರ ಒಪ್ಪಿಕೊಳ್ಳಲಾಗುತ್ತದೆ” ಎಂದು ತನ್ನ ಉಪನ್ಯಾಸದಲ್ಲಿ ತಿಳಿಸಿದರು.

ನ್ಯಾಯಾಧೀಶರಿಗೆ ನೆಟ್ಟಿಗರ ತರಾಟೆ

ನ್ಯಾಯಾಧೀಶರ ಹೇಳಿಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ನ್ಯಾಯಾಧೀಶನ ವಿರುದ್ಧವಾಗಿ ಬಾರ್‌ ಬೆಂಚ್ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. “ಪ್ರಜಾಪ್ರಭುತ್ವ ದೇಶದಲ್ಲಿ ಇಂತಹ ನ್ಯಾಯಾಧೀಶರ ವಕೀಲಿ ಪರವಾನಗಿಯನ್ನು ರದ್ದು ಮಾಡಬೇಕು” ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ನ್ಯಾಯಾಧೀಶರ ಹೇಳಿಕೆಯನ್ನು ಟೀಕಿಸಿದ ಹೈದರಾಬಾದ್ ಸಂಸದ ಓವೈಸಿ, “ಭಾರತದ ಸಂವಿಧಾನವು ತನ್ನ ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ” ಎಂದು ಹೇಳಿದರು.

“ವಿಎಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿದೆ. ಇದು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದೆ. ಅಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಭಾಗವಹಿಸಿದ್ದು ದುರದೃಷ್ಟಕರ. ನ್ಯಾಯಾಧೀಶರಿಗೆ ಸಂವಿಧಾನವು ನ್ಯಾಯಾಂಗವು ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವನ್ನು ನಿರೀಕ್ಷಿಸುತ್ತದೆ ಎಂದು ನೆನೆಪಿಸುವುದು ಮುಖ್ಯವಾಗಿದೆ” ಎಂದು ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಮುಂದಿನ ಭವಿಷ್ಯದ ಕುರಿತು ಅರಿವಿಲ್ಲದ, ಅರಿವಿದ್ದರೂ ಕಿಲುಬು ಕಾಸಿನ ಆಸೆಗೆ ಶಾಂತಿಪ್ರಿಯ “ಅಲ್ಪ ಸಂಖ್ಯಾತರ” ಓಲೈಕೆಗೆ ಮುಂದಾಗಿರುವುದು ದುರಂತ. ಮುಂದೆ ನಿಮ್ಮ ಮನೆಗಳಲ್ಲಿ ಈ ಮುಸ್ಲಿಮರ ದೆಸೆಯಿಂದ ಮಾರಿ ಹಬ್ಬ ಆದಾಗ ಜ್ಞಾನೋದಯ ಆಗಬಹುದೇನೋ. ಹಿಂದೂಗಳು ಚೆನ್ನಾಗಿದ್ದರೆ ಎಲ್ಲರೂ ಚೆನ್ನಾಗಿರುತ್ತಾರೆ ಎಂಬುದಕ್ಕೆ ಸಾವಿರ ವರ್ಷಗಳ ಇತಿಹಾಸವೇ ಸಾಕ್ಷಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X