ಬುಡಕಟ್ಟು ವ್ಯವಹಾರಗಳ ಖಾತೆ ಮೇಲ್ಜಾತಿಯವರಿಗೆ ವಹಿಸಬೇಕು: ಕೇಂದ್ರ ಸಚಿವ ಸುರೇಶ್ ಗೋಪಿ

Date:

Advertisements

ಮೇಲ್ಜಾತಿಯ ಸದಸ್ಯರು ಬುಡಕಟ್ಟು ವ್ಯವಹಾರಗಳ ಖಾತೆಯನ್ನು ನಿರ್ವಹಿಸಬೇಕು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ವಿವಾದ ಸೃಷ್ಟಿಸಿದ್ದಾರೆ.

ದೆಹಲಿಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನಟ-ರಾಜಕಾರಣಿ ಸುರೇಶ್ ಗೋಪಿ, ಮೇಲ್ಜಾತಿಯ ನಾಯಕರು ಸಚಿವಾಲಯದ ಮೇಲ್ವಿಚಾರಣೆಯನ್ನು ವಹಿಸಿಕೊಂಡರೆ ಮಾತ್ರ ಬುಡಕಟ್ಟು ಕಲ್ಯಾಣದಲ್ಲಿ ನಿಜವಾದ ಪ್ರಗತಿ ಸಾಧ್ಯ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

Advertisements

ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಮಾತ್ರ ಬುಡಕಟ್ಟು ವ್ಯವಹಾರಗಳ ಸಚಿವರನ್ನಾಗಿ ಮಾಡಬೇಕು ಎಂಬುವುದು ನಮ್ಮ ದೇಶದ ಶಾಪ. ಬುಡಕಟ್ಟು ಸಮುದಾಯದ ಹೊರಗಿನ ಯಾರನ್ನಾದರೂ ಅವರ ಕಲ್ಯಾಣಕ್ಕಾಗಿ ನೇಮಿಸಬೇಕು ಎಂಬುದು ನನ್ನ ಕನಸು ಮತ್ತು ನಿರೀಕ್ಷೆಯಾಗಿದೆ. ಬ್ರಾಹ್ಮಣ ಅಥವಾ ನಾಯ್ಡು ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಧಿಕಾರ ವಹಿಸಿಕೊಳ್ಳಲಿ. ಇದರಿಂದ ಗಮನಾರ್ಹ ಬದಲಾವಣೆ ಸಾಧ್ಯ, ಅದೇ ರೀತಿ, ಮುಂದುವರಿದ ಸಮುದಾಯಗಳ ಕಲ್ಯಾಣ ಖಾತೆಗಳನ್ನು ಬುಡಕಟ್ಟು ನಾಯಕರಿಗೆ ವಹಿಸಬೇಕು. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಅಂತಹ ಬದಲಾವಣೆ ಆಗಬೇಕು ಎಂದು ಸುರೇಶ್ ಗೋಪಿ ಹೇಳಿದ್ದಾರೆ.

ಬುಡಕಟ್ಟು ವ್ಯವಹಾರಗಳ ಖಾತೆಯನ್ನು ನಿರ್ವಹಿಸುವ ಬಯಕೆ ವ್ಯಕ್ತಪಡಿಸಿದ ತ್ರಿಶೂರ್ ಸಂಸದ ಸುರೇಶ್ ಗೋಪಿ, ಈ ಕುರಿತು ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ. ಸುರೇಶ್ ಗೋಪಿ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Download Eedina App Android / iOS

X