ನನ್ನನ್ನು ಹೊಡೆಯಲು ಆಜ್ಞೆ ಮಾಡಿದವರು ಬಂದು ಕ್ಷಮೆ ಕೇಳಲಿ: ದೆಹಲಿಯಲ್ಲಿ ಲಾಠಿ ಏಟು ತಿಂದ ಮುಸ್ಕಾನ್ ಶರ್ಮಾ

Date:

ನಾವು ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಿರಲಿಲ್ಲ. ಆದರೂ ನನ್ನ ಮೇಲೆ ಲಾಠಿ ಬೀಸಿದ್ದು ಯಾಕೆ? ಲಾಠಿ ಬೀಸುವಂತೆ ಆಜ್ಞೆ ಕೊಟ್ಟವರು ಯಾರು? ಅವರು ಬಂದು ಕ್ಷಮೆ ಕೇಳಿಬಿಡಲಿ ಎಂದು ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಸ್ಕಾನ್ ಶರ್ಮಾ ಆಗ್ರಹಿಸಿದ್ದಾರೆ.

- Advertisement -

“ನಾನು ಶಾಂತಿಯುತವಾಗಿ ನಡೆದುಕೊಂಡು ಹೋಗುತ್ತಿದ್ದೆ. ಹಾಗಿದ್ದರೂ ಪೊಲೀಸರು ನನ್ನನ್ನು ಏಕೆ ಹೊಡೆದರು? ರ್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿ ನನಗೆ ಏಕೆ ಕಪಾಳಮೋಕ್ಷ ಮಾಡಿದರು? ಮಹಿಳೆಯ ಮೇಲೆ ಪುರುಷ ಪೊಲೀಸ್ ಸಿಬ್ಬಂದಿ ಕೈ ಹಾಕಬಾರದು ಎಂಬ ನಿಯಮವಿದ್ದರೂ, ಒಬ್ಬ ಪುರುಷ ಸಿಬ್ಬಂದಿ ನನ್ನ ಹಿಂಭಾಗಕ್ಕೆ ಲಾಠಿ ಚುಚ್ಚಲು ಯಾಕೆ ಪ್ರಯತ್ನಿಸಿದರು?” ಎಂದು ಅವರು ಪ್ರಶ್ನಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳು ಕ್ಷಮೆಯಾಚಿಸಿದರೆ ತಮಗೆ ಸಮಾಧಾನವಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲಿಂಗ್ ಮತ್ತು ದ್ವೇಷದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಕಾನ್‌, “ನನ್ನ ಹೆಸರು ಮುಸ್ಕಾನ್. ನನ್ನ ಪೂರ್ಣ ಹೆಸರು ಮುಸ್ಕಾನ್ ಶರ್ಮಾ. ಆದರೆ ನನ್ನನ್ನು ಮುಸ್ಲಿಂ ಎಂದು ಭಾವಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡಿದರೆ ಆತ ಮುಸ್ಲಿಂ ಎನ್ನುವ ಕಥಾನಕವನ್ನು ಈ ದೇಶದಲ್ಲಿ ನಿರ್ಮಿಸಲಾಗುತ್ತಿದೆ. ಒಬ್ಬರನ್ನು ಮುಸ್ಲಿಂ ಎಂದು ಕರೆದ ತಕ್ಷಣ ಅವರು ಹೇಗೆ ದೇಶದ್ರೋಹಿಯಾಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 3 ಕೋಟಿ ರೂ. ವಂಚನೆ ಆರೋಪ: ನಟ ಸಲ್ಮಾನ್ ಖಾನ್ ಮತ್ತು ಸಹೋದರಿಗೆ ಚಂಡೀಗಢ ಕೋರ್ಟ್ ಸಮನ್ಸ್

“ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲಿಂಗ್ ಮತ್ತು ನಾವು ಎದುರಿಸುತ್ತಿರುವ ಕಿರುಕುಳ ಈ ದೇಶದ ವಾತಾವರಣದ ಬಗ್ಗೆ ಸಾಕಷ್ಟು ಹೇಳುತ್ತದೆ. ಈ ದೇಶದ ಯುವ ಮಹಿಳೆಯಾಗಿ ನನ್ನ ರಕ್ಷಣೆಗೆ ನಾನು ಎಲ್ಲಿಗೆ ಹೋಗಬೇಕು?” ಎಂದು ಮುಸ್ಕಾನ್ ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...