ಉಜ್ಬೆಕಿಸ್ತಾನ ಸಿರಪ್‌ ಪ್ರಕರಣ | ನೋಯ್ಡಾ ಔ‍ಷಧ ಘಟಕದ ಪರವಾನಗಿ ರದ್ದು

Date:

ಉಜ್ಬೇಕಿಸ್ತಾನದ ಸಿಪ್‌ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿ ನೋಯ್ಡಾ ಮೂಲದ ಔಷಧೀಯ ಘಟಕ ಮಾರಿಯನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ.

ಉಜ್ಬೇಕಿಸ್ತಾನದ 18 ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ಗಳಲ್ಲಿ ಮಾರಿಯನ್‌ ಬಯೋಟೆಕ್‌ನ ಕೆಮ್ಮಿನ ಸಿರಪ್‌ ಡಾಕ್‌ 1 ಸಹ ಇದೆ ಎಂದು ಹೇಳಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಈ ಘಟನೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಔಷಧ ನಿಯಂತ್ರಕ ಅಧಿಕಾರಿಗಳು ತನಿಖೆ ಕೈಗೊಂಡಿದ್ದರು.

“ಮಕ್ಕಳ ಸಾವಿಗೆ ಸಂಬಂಧಿಸಿ ತನಿಖೆ ಕೈಗೊಂಡಾಗಿನಿಂದ ಜನವರಿಯಿಂದ ಮಾರಿಯನ್‌ ಬಯೋಟೆಕ್‌ನ ಪರವಾನಗಿಯನ್ನು ಅಮಾನತಿನಲ್ಲಿಡಲಾಗಿತ್ತು. ಈಗ ಉತ್ತರ ಪ್ರದೇಶದ ಔಷಧ ನಿಯಂತ್ರಣ ಮತ್ತು ಪರವಾನಗಿ ಪ್ರಾಧಿಕಾರ ಸಂಸ್ಥೆಯ ಪರವಾನಗಿ ರದ್ದುಗೊಳಿಸಿದೆ” ಎಂದು ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣಕ್ಕೆ ಸಂಬಂಧಿಸಿ ನೋಯ್ಡಾ ಪೊಲೀಸರು ಮಾರ್ಚ್‌ 3 ರಂದು ಮಾರಿಯನ್‌ ಬಯೋಟೆಕ್‌ನ ಮೂವರು ಉದ್ಯೋಗಿಗಳನ್ನು ಬಂಧಿಸಿದ್ದರು. ತನಿಖೆ ವೇಳೆ ಮಾರಿಯನ್‌ ಬಯೋಟೆಕ್‌ನ ಕೆಮ್ಮಿನ ಔಷಧಿಗಳು ಕಲಬೆರಕೆಯಿಂದ ಕೂಡಿದ್ದು ಗುಣಮಟ್ಟದ ಕೊರತೆಯಿದೆ ಎಂದು ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...