ಕೋವಿಡ್ ಕಾಲದಂತೆಯೇ ಎಲ್‌ಪಿಜಿ ಬಿಕ್ಕಟ್ಟನ್ನೂ ಜಯಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

Date:

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಂಬಂಧಿತ ಕಳವಳಗಳನ್ನು ಭಾರತವು ಕೋವಿಡ್ ಸಾಂಕ್ರಾಮಿಕ ಕಾಲದಂತೆ ಯಶಸ್ವಿಯಾಗಿ ಎದುರಿಸಿ ನಿವಾರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಎನ್ಎಕ್ಸ್ಟಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅಡಚಣೆಗಳು ಭಾರತೀಯ ನಾಗರಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಬಹು ರಂಗಗಳಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

“ಕೋವಿಡ್ ಕಾಲದಂತೆಯೇ ಈ ಬಿಕ್ಕಟ್ಟನ್ನೂ ನಾವು ನಿವಾರಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸ ನನಗೆ 140 ಕೋಟಿ ಭಾರತೀಯರ ಮೇಲೆ ಇದೆ. ಪ್ರಪಂಚದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳಿಂದಾಗಿ ನಾಗರಿಕರು ಯಾವುದೇ ಸಮಸ್ಯೆಗಳನ್ನು ಎದುರಿಸಬಾರದು ಎಂಬುದು ನಮ್ಮ ಸಂಕಲ್ಪ” ಎಂದು ಮೋದಿ ಹೇಳಿದರು.

ಎಲ್‌ಪಿಜಿ ಲಭ್ಯತೆಯ ಕುರಿತು ಅನಗತ್ಯ ಭೀತಿ ಮೂಡಿಸುವ ಪ್ರಯತ್ನಗಳ ವಿರುದ್ಧ ಪ್ರಧಾನಿ ಎಚ್ಚರಿಕೆ ನೀಡಿದರು. ಅಕ್ರಮ ಮಾರಾಟ ಹಾಗೂ ಅತಿ ಸಂಗ್ರಹಣೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುವ ಶಕ್ತಿಗಳನ್ನು ತಡೆಯಲು ರಾಜ್ಯ ಸರ್ಕಾರಗಳು ಮೇಲ್ವಿಚಾರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಪ್ರಧಾನಿ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ನೆತನ್ಯಾಹು ಬದುಕಿದ್ದಾರಾ? ಇರಾನ್ ರಣಕಹಳೆಗೆ ತತ್ತರಿಸಿದ ಇಸ್ರೇಲ್

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಜಗತ್ತಿನ ಅನೇಕ ದೇಶಗಳ ಮೇಲೆ ಪರಿಣಾಮ ಬೀರಿದ್ದು, ಇಂಧನ ಕ್ಷೇತ್ರದಲ್ಲಿ ಕಳವಳವನ್ನುಂಟು ಮಾಡಿದೆ ಎಂದು ಅವರು ಉಲ್ಲೇಖಿಸಿದರು. ಆದರೆ, ಭಾರತ ತನ್ನ ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಾಗತಿಕ ನಾಯಕರೊಂದಿಗೆ ಭಾರತ ನಿರಂತರ ಸಂಪರ್ಕದಲ್ಲಿದ್ದು, ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ಅಡಚಣೆಗಳನ್ನು ನಿವಾರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

“ಭಾರತದ ದೀರ್ಘಕಾಲೀನ ಇಂಧನ ಕಾರ್ಯತಂತ್ರದ ಕುರಿತು ಮಾತನಾಡಿದ ಅವರು, ಪೆಟ್ರೋಲಿಯಂ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಕಳೆದ ದಶಕದಲ್ಲಿ ಎಥೆನಾಲ್ ಮಿಶ್ರಣ ವಿಸ್ತರಣೆ ಹಾಗೂ ಜೈವಿಕ ಇಂಧನಗಳ ಉತ್ತೇಜನಕ್ಕೆ ಸರ್ಕಾರ ಒತ್ತು ನೀಡಿದೆ. 2014ರ ಮೊದಲು ದೇಶದಲ್ಲಿ ಎಥೆನಾಲ್ ಮಿಶ್ರಣ ಸಾಮರ್ಥ್ಯ ಕೇವಲ 1 ರಿಂದ 1.5 ಶೇಕಡಾವರೆಗೆ ಮಾತ್ರ ಇತ್ತು. ಇಂದು ಪೆಟ್ರೋಲ್ ನಲ್ಲಿ ಸುಮಾರು 20 ಶೇಕಡಾ ಎಥೆನಾಲ್ ಮಿಶ್ರಣವನ್ನು ಮಾಡುತ್ತಿದ್ದೇವೆ,” ಎಂದು ಪ್ರಧಾನಿ ಹೇಳಿದರು.

ಜಾಗತಿಕ ಬಿಕ್ಕಟ್ಟುಗಳನ್ನು ಎದುರಿಸಲು ಭಾರತ ತನ್ನ ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪಗಳು ಹಾಗೂ ಇಂಧನ ಮೂಲಸೌಕರ್ಯವನ್ನು ವಿಸ್ತರಿಸಿದೆ. ಭಾರತದ ಕಾರ್ಯತಂತ್ರದ ಪೆಟ್ರೋಲಿಯಂ ನಿಕ್ಷೇಪಗಳು ಈಗ 50 ಲಕ್ಷ ಟನ್ ಗಳನ್ನು ಮೀರಿದ್ದು, ಎಲ್‌ಪಿಜಿ ಸಂಪರ್ಕಗಳ ಸಂಖ್ಯೆ 2014ರಲ್ಲಿ 14 ಕೋಟಿಯಿಂದ ಈಗ 33 ಕೋಟಿಗೆ ಏರಿಕೆಯಾಗಿದೆ ಎಂದು ಮೋದಿ ವಿವರಿಸಿದರು.

“ಕಳೆದ ದಶಕದಲ್ಲಿ ದೇಶದ ಅನಿಲ ಕೊಳವೆಮಾರ್ಗ ಜಾಲ, ಎಲ್‌ಎನ್‌ಜಿ ಟರ್ಮಿನಲ್‌ಗಳು ಮತ್ತು ಎಲ್‌ಪಿಜಿ ವಿತರಣಾ ಮೂಲಸೌಕರ್ಯವು ಗಮನಾರ್ಹವಾಗಿ ವಿಸ್ತರಿಸಲಾಗಿದೆ. ಜಾಗತಿಕ ಸವಾಲುಗಳ ನಡುವೆಯೂ ಭಾರತ ಸ್ಥಿರವಾಗಿ ಮುಂದುವರಿಯುತ್ತಿದ್ದು, ಜಾಗತಿಕ ಬೆಳವಣಿಗೆಯ ಪ್ರಮುಖ ಚಾಲಕಶಕ್ತಿಯಾಗಿ ಉಳಿದಿದೆ. ಜಗತ್ತು ಕಠಿಣ ಹಂತವನ್ನು ಎದುರಿಸುತ್ತಿದೆ. ಆದರೆ ಭಾರತವು ವೇಗವಾಗಿ ಹಾಗೂ ಸ್ಥಿರವಾಗಿ ಮುಂದುವರಿಯುತ್ತಿದೆ” ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...