‘ಲಿವ್-ಇನ್’ ಸಂಬಂಧವನ್ನೂ ನೋಂದಾಯಿಸಬೇಕು: ಕೋರ್ಟ್‌ ಆದೇಶ

Date:

Advertisements

‘ಲಿವ್-ಇನ್’ ಸಂಬಂಧಗಳನ್ನು ಕೂಡ ನೋಂದಾಯಿಸಿಕೊಳ್ಳಬೇಕು. ಅದಕ್ಕಾಗಿ, ಹೊಸ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಬೇಕು ಎಂದು ರಾಜಸ್ಥಾನ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಕ್ಷಣೆ ಕೋರಿ ಹಲವಾರು ‘ಲಿವ್-ಇನ್ ಸಂಬಂಧ’ದಲ್ಲಿರುವ ಸಂಗಾತಿಗಳು ಅಲ್ಲಿಸಿದ್ದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿ ಅನ್ನಪ್ ಕುಮಾರ್ ಧಂಡ್ ಅವರಿದ್ದ ಏಕ ಸದಸ್ಯ ಪೀಠವು ವಿಚಾರಣೆ ನಡೆಸಿದೆ. “ಲಿವ್-ಇನ್‌ ಸಂಬಂಧಕ್ಕೆ ರಕ್ಷಣೆ ಕೊಡುವ ಕಾನೂನು ಜಾರಿಗೆ ಬರುವವರೆಗೆ, ಲಿವ್-ಇನ್ ಸಂಬಂಧಗಳನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು” ಎಂದು ಹೇಳಿದೆ.

“ಹಲವಾರು ದಂಪತಿಗಳು ‘ಲಿವ್-ಇನ್’ ಸಂಬಂಧದಲ್ಲಿ ವಾಸಿಸುತ್ತಿದ್ದಾರೆ. ಅವರ ಸಂಬಂಧದ ಸ್ಥಿತಿಗೆ ಮಾನ್ಯತೆ ದೊರೆಯದ ಕಾರಣ, ಅವರು ತಮ್ಮ ಕುಟುಂಬಗಳು ಮತ್ತು ಸಮಾಜದಿಂದ ಬೆದರಿಕೆ, ಅಪಾಯಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ, ಅವರು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ರಕ್ಷಣೆ ಕೋರಿ 226ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸುತ್ತಿದ್ದಾರೆ. ಪರಿಣಾಮವಾಗಿ, ನ್ಯಾಯಾಲಯಗಳು ಅಂತಹ ಅರ್ಜಿಗಳು ಹೆಚ್ಛಾಗಿ ತುಂಬುತ್ತಿವೆ” ಎಂದು ಪೀಠ ಗಮನಿಸಿದೆ.

Advertisements

“ಲಿವ್-ಇನ್ ಸಂಬಂಧದ ಕಲ್ಪನೆಯು ವಿಶಿಷ್ಟ ಮತ್ತು ಆಕರ್ಷಕವಾಗಿ ಕಾಣಿಸಬಹುದು. ಆದರೆ, ವಾಸ್ತವದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳು ಮತ್ತು ಸವಾಲುಗಳಿವೆ. ಈ ಸಂಬಂಧದಲ್ಲಿ ಮಹಿಳೆಯ ಸ್ಥಾನಮಾನವು ಹೆಂಡತಿಯ ಸ್ಥಾನಮಾನವಲ್ಲ. ಸಾಮಾಜಿಕ ಅನುಮೋದನೆ ಅಥವಾ ಪವಿತ್ರತೆಯನ್ನು ಹೊಂದಿರುವುದಿಲ್ಲ” ಎಂದು ನ್ಯಾಯಮೂರ್ತಿ ಅನ್ನಪ್ ಕುಮಾರ್ ಹೇಳಿದ್ದಾರೆ.

“ಲಿವ್-ಇನ್-ಸಂಬಂಧದ ಒಪ್ಪಂದವನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು. ಇದಕ್ಕೆ ಅಗತ್ಯ ವೆಬ್‌ ಪೋರ್ಟಲ್‌ಅನ್ನು ಸರ್ಕಾರ ಸ್ಥಾಪಿಸಬೇಕು. ಸಕ್ಷಮ ಪ್ರಾಧಿಕಾರವು ಲಿವ್‌-ಇನ್ ಸಂಬಂಧದ ದಂಪತಿಗಳು ಮತ್ತು ಅವರಿಂದ ಜನಿಸುವ ಮಕ್ಕಳ ಕುಂದುಕೊರತೆಗಳನ್ನು ಪರಿಹರಿಸುವ ಕಾರ್ಯವನ್ನೂ ಮಾಡಬೇಕು” ಎಂದು ಕೋರ್ಟ್‌ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X