ಲಿವ್-ಇನ್ ಸಂಬಂಧ ಮಧ್ಯಮ ವರ್ಗದ ಮೌಲ್ಯಕ್ಕೆ ವಿರುದ್ಧ, ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ: ಅಲಹಾಬಾದ್ ಹೈಕೋರ್ಟ್‌

Date:

Advertisements

ಲಿವ್-ಇನ್ ಸಂಬಂಧವು ಮಹಿಳೆಯರಿಗೆ ಹೆಚ್ಚು ಹಾನಿ ಮಾಡುತ್ತದೆ. ಸಂಬಂಧದಿಂದ ಬೇರ್ಪಟ್ಟಾಗ ಮಹಿಳೆಯರಿಗೆ ಸಮಸ್ಯೆಯಾಗುತ್ತದೆ. ಪುರುಷರು ಮದುವೆಯಾಗಿ ತಮ್ಮ ಜೀವನ ಮುಂದುವರಿಸುತ್ತಾರೆ. ಆದರೆ ಮಹಿಳೆಯರಿಗೆ ಜೀವನ ಸಂಗಾತಿಯನ್ನು ಹುಡುಕುವುದು ಕಷ್ಟ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಸಿದ್ಧಾರ್ಥ್ ಅವರನ್ನು ಒಳಗೊಂಡ ಏಕಸದಸ್ಯ ಪೀಠವು ಲಿವ್‌-ಇನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಲಿವ್‌-ಇನ್ ಎಂಬುದು ಮಧ್ಯಮ ವರ್ಗದ ಭಾರತೀಯ ಸಮಾಜದ ಸ್ಥಿರವಾದ ಮಾನದಂಡಗಳಿಗೆ ವಿರುದ್ಧವಾಗಿವೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Advertisements

“ಲಿವ್-ಇನ್ ಸಂಬಂಧ ಪರಿಕಲ್ಪನೆಯು ಮಹಿಳೆಯರ ಹಿತಾಸಕ್ತಿಗೆ ವಿರುದ್ಧವಾಗಿದೆ. ಲಿವ್‌-ಇನ್ ಸಂಬಂಧದ ಬಳಿಕವೂ ಪುರುಷರು ಹಲವು ಬೇರೆ ಮದುವೆಯಾಗಬಹುದು, ಬೇರೆ ಮಹಿಳೆಯೊಂದಿಗೆ ಸಂಬಂಧವೂ ಇಟ್ಟುಕೊಳ್ಳಬಹುದು. ಆದರೆ ಮಹಿಳೆಯರಿಗೆ ಬೇರೆ ಸಂಗಾತಿಯನ್ನು ಹುಡುಕುವುದು ಕಷ್ಟ” ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್‌ ಲಿವ್-ಇನ್ ಸಂಬಂಧವನ್ನು ಕಾನೂನುಬದ್ಧಗೊಳಿಸಿದ ಬಳಿಕ ನ್ಯಾಯಾಲಯದಲ್ಲಿ ಅಂತಹ ಪ್ರಕರಣಗಳೇ ತುಂಬಿದೆ. ಈ ಪ್ರಕರಣವನ್ನು ಮಧ್ಯಮ ವರ್ಗದ ಸಮಾಜದಲ್ಲಿ ಇತ್ಯರ್ಥಪಡಿಸಲು ಸಾಧ್ಯವಾಗದ ಕಾರಣದಿಂದಾಗಿ ನ್ಯಾಯಾಲಯದವರೆಗೂ ಬರುತ್ತಿದೆ” ಎಂದು ಕೋರ್ಟ್ ತಿಳಿಸಿದೆ.

ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ಹೇಳಿಕೆ ನೀಡಿದ್ದಾರೆ. ವಿವಾಹದ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಪ್ರಕರಣ ಇದಾಗಿದೆ.

ಅಲಹಾಬಾದ್ ಹೈಕೋರ್ಟ್‌ ನ್ಯಾಯಾಮೂರ್ತಿಗಳ ಈ ಅಭಿಪ್ರಾಯವು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಪುರುಷರು ಹೇಗಿದ್ದರೂ ನಡೆಯುತ್ತದೆ, ಆದರೆ ಮಹಿಳೆ ಮಾತ್ರ ಸಮಾಜ ಬೆಳೆಸಿದ ನಿಯಮಗಳಿಗೆ ಬದ್ಧವಾಗಿರಬೇಕು ಎಂಬಂತಹ ಹೇಳಿಕೆ ನೀಡಿರುವುದು ವಿಷಾದನೀಯ. ಸುಪ್ರೀಂ ಕೋರ್ಟ್‌ ಲಿವ್‌-ಇನ್‌ ಸಂಬಂಧಗಳನ್ನು ಕಾನೂನುಬದ್ಧಗೊಳಿಸಿದೆ. ಲಿವ್-ಇನ್ ಸಂಬಂಧಗಳನ್ನು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿಯೂ ಗುರುತಿಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X