ಲೋಕಸಭಾ ಚುನಾವಣೆಗೆ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Date:

ಏಪ್ರಿಲ್‌ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ನಿಡಲಾಗಿರುವ ಐದು ಮಂದಿ ಅಭ್ಯರ್ಥಿಗಳಲ್ಲಿ ನಾಲ್ವರು ರಾಜಸ್ಥಾನ ಹಾಗೂ ಒಬ್ಬರು ತಮಿಳುನಾಡಿನಿಂದ ಸ್ಪರ್ಧೆ ಮಾಡಲಿದ್ದಾರೆ.

ರಾಜಸ್ಥಾನದ ಕೋಟದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ಪ್ರಹ್ಲಾದ್ ಗುಂಜಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಜಸಮಾಂಡ್‌ನಿಂದ ಸುದರ್ಶನ್ ರಾವತ್, ಬಿಲ್ವಾರದಿಂದ ದಾಮೋದರ್ ಗುರ್ಜರ್ ಹಾಗೂ ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರದಿಂದ ಸಿ ರಾಬರ್ಟ್ ಬ್ರೂಸ್ ಸ್ಪರ್ಧಿಸಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಬಿಜೆಪಿಯಲ್ಲಿದ್ದ ಪ್ರಹ್ಲಾದ್ ಗುಂಜಾಲ್ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಗುಂಜಾಲ್ ಅವರು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಅವರ ನಿಕಟವರ್ತಿಯಾಗಿದ್ದು, ಉತ್ತರ ಕೋಟದಿಂದ ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಫರಾಭವಗೊಂಡಿದ್ದರು.

ಏಳು ಹಂತದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇಲ್ಲಿಯವರೆಗೂ 190 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ...

Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ...

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...