2014ರಲ್ಲಿ ಬಿಜೆಪಿಗೆ ಬೆಂಬಲಿಸಿದ್ದೆವು, ಆದರೆ ಅವರು ನಿರೀಕ್ಷೆಯಂತೆ ಕೆಲಸ ಮಾಡಲಿಲ್ಲ: ನರೇಶ್ ಟೀಕಾಯತ್

Date:

Advertisements

ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಬಹಿರಂಗವಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿತ್ತು. ಆದರೆ ಪಕ್ಷವು ಅಧಿಕಾರಕ್ಕೆ ಬಂದ ನಂತರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿಲ್ಲ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟೀಕಾಯತ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಬಗ್ಗೆ ಆಕ್ರೋಶ ಹೊರಹಾಕಿದರು.

ದೆಹಲಿಯ ಗಡಿಯಲ್ಲಿ 2020-21ರಲ್ಲಿ ನಡೆದ 13 ತಿಂಗಳ ಸುದೀರ್ಘ ಪ್ರತಿಭಟನೆಯಲ್ಲಿ ಹುತಾತ್ಮರಾದ ಸುಮಾರು 750 ರೈತರನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಿಂಚಿತ್ತು ಸ್ಮರಿಸಲಿಲ್ಲ. ಕೇಸರಿ ಪಕ್ಷವು ಸರ್ವಾಧಿಕಾರದಿಂದ ಮೆರೆಯುತ್ತಿದೆ ಎಂದು ಟೀಕಾಯತ್‌ ಹೇಳಿದರು.

Advertisements

“ಬಿಕೆಯು ದೊಡ್ಡ ಸಂಘಟನೆಯಾಗಿದ್ದು, ಇಲ್ಲಿನ ಸದಸ್ಯರು ಒಂದಲ್ಲ ಒಂದು ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ. ಕೆಲವರು ಅಭ್ಯರ್ಥಿಗಳಿಗೆ ಸಂಬಂಧಿಕರಾಗಿದ್ದರೆ, ಕೆಲವರು ಅಭ್ಯರ್ಥಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಅಥವಾ ಅವರೊಂದಿಗೆ ವೈಯಕ್ತಿಕ ಹಂತದಲ್ಲಿ ಸಂಬಂಧ ಹೊಂದಿದ್ದಾರೆ” ಎಂದು ಟೀಕಾಯತ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

“ನಾನು 2014ರ ಚುನಾವಣೆಯಲ್ಲಿ ಬಿಜೆಪಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದೆ ಎಂದು ಹೇಳಲು ಯಾವುದೇ ಹಿಂಜರಿಕೆಯಿಲ್ಲ. ಆದರೆ ಅವರು ತಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲಿಲ್ಲ. ಅವರು ರಾಮ ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಅವರು ತಮ್ಮ ಮಾನದಂಡಗಳೊಂದಿಗೆ ಉತ್ತಮವಾಗಿ ಕೆಲಸ ಮಾಡಿರಬಹುದು ಆದರೆ ಬಹುತೇಕವುಗಳನ್ನು ನಿರ್ಲಕ್ಷಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಭಾರತದಂತ ದೊಡ್ಡ ರಾಷ್ಟ್ರದಲ್ಲಿ ಹಲವು ಸಮಸ್ಯೆಗಳಿವೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಆದರೆ ಹಲವು ಸಮಸ್ಯೆಗಳನ್ನು ಸರ್ಕಾರದಿಂದ ಕಡೆಗಣಿಸಲಾಯಿತು. ಮುಖ್ಯವಾಗಿ ರೈತರ ಸಮಸ್ಯೆಯನ್ನು ನಿರ್ಲಕ್ಷಿಸಲಾಯಿತು ಎಂದು ನರೇಶ್ ಟೀಕಾಯತ್ ಹೇಳಿದರು.

“13 ತಿಂಗಳ ರೈತರ ಹೋರಾಟದಲ್ಲಿ 750 ರೈತರು ಹುತಾತ್ಮರಾದರು. ಆದರೆ ಸರ್ಕಾರ ಹುತಾತ್ಮ ಯೋಧರನ್ನು ಸ್ಮರಿಸಲಿಲ್ಲ. ವಿಶ್ವದಾದ್ಯಂತ ಚರ್ಚಿಸಲಾದ ದೊಡ್ಡ ಚಳುವಳಿ ಇದಾಗಿತ್ತು. ಬಿಜೆಪಿಯು 10 ವರ್ಷದ ಆಡಳಿತದಲ್ಲಿ ಸರ್ವಾಧಿಕಾರದಿಂದ ಮೆರೆಯುತ್ತಿದೆ. ಹಠಮಾರಿ ವ್ಯಕ್ತಿಯೊಬ್ಬ ಏನು ಹೇಳುತ್ತಾನೊ ಅದನ್ನೆ ಮಾಡಲಾಗುತ್ತಿದೆ. ಒಂದು ದೇಶದಲ್ಲಿ ಕಾರ್ಯನಿರ್ವಹಿಸುವ ರೀತಿ ಇದಲ್ಲ. ಕೆಲವು ಬಾರಿ ಸರ್ಕಾರ ತಲೆಬಾಗಬೇಕು, ಮತ್ತು ಕೆಲವು ಬಾರಿ ಜನರು ತಲೆಬಾಗಬೇಕು. ಆಗ ಕೆಲಸ ಸುಗಮವಾಗಿ ನಡೆಯುತ್ತದೆ” ಎಂದು ಟೀಕಾಯತ್ ಹೇಳಿದರು.

“ಸರ್ಕಾರ ಸಮತೋಲನ ಕಾಯ್ದುಕೊಂಡು ಉತ್ತಮ ವಾತಾವರಣ ಕಲ್ಪಿಸಬೇಕಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಲವು ಸಮಸ್ಯೆಗಳಿವೆ. ಬಿಕೆಯುಗೆ ಹಲವರ ಬೆಂಬಲವಿದೆ. ಆದರೆ ನಮ್ಮ ಜನರಿಗೆ ಇಂತವರಿಗೆ ಮತ ನೀಡಿ ಎಂದು ಹೇಳುವುದಿಲ್ಲ. ಏ.17ರಂದು ಮಹಾ ಪಂಚಾಯತ್‌ ಸಭೆ ಕೈಗೊಳ್ಳಲಿದ್ದು, ಚುನಾವಣೆಯ ಬಗ್ಗೆ ಸಮಗ್ರ ನಿರ್ಧಾರ ಕೈಗೊಳ್ಳಬಹುದು” ಎಂದು ಟೀಕಾಯತ್‌ ತಿಳಿಸಿದರು.

ಟೀಕಾಯತ್‌ ಅವರ ಬಿಕೆಯು ಪ್ರಾಬಲ್ಯವುಳ್ಳ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಏ.19 ಹಾಗೂ ಏ.26 ರಂದು ಚುನಾವಣೆಗಳು ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X